Advertisement

ಯೋಗೀಶಗೌಡ ಹತ್ಯೆ: ಮತ್ತೊಬ್ಬನ ಬಂಧನ

11:00 PM Mar 14, 2020 | Team Udayavani |

ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿ ಸಿ.ಹರ್ಷಿತ್‌ ಎಂಬ ಆರೋಪಿಯನ್ನು ಬಂಧಿಸಿ ನಗರದ 2ನೇ ಜೆಎಂಎಫ್‌ಸಿ ನ್ಯಾಯಾಲಯದ 2ನೇ ದಿವಾಣಿ ನ್ಯಾಯಾಧೀಶರಾದ ಕುರಣಿಕಾಂತ್‌ ಧಾಕು ಅವರ ನಿವಾಸಕ್ಕೆ ಕರೆದುಕೊಂಡು ಹೋಗಿ ಹಾಜರುಪಡಿಸಲಾಯಿತು.

Advertisement

ಆರೋಪಿಯನ್ನು ಮಾ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ಬಳಿಕ ಆರೋಪಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಇದಕ್ಕೂ ಮುನ್ನ ಹರ್ಷಿತ್‌ನನ್ನು ಶುಕ್ರವಾರ ಜಿಲ್ಲಾಸ್ಪತ್ರೆಗೆ ಕರೆತಂದು ಆರೋಗ್ಯ ಪರೀಕ್ಷೆ ಮಾಡಿಸಲಾಯಿತು. ಈ ಹಿಂದೆ ಬಂ ಧಿತ ಆರು ಜನ ಆರೋಪಿಗಳ ನ್ಯಾಯಾಂಗ ಬಂಧನ ಅವ ಧಿಯೂ ಮಾ.20ಕ್ಕೆ ಮುಕ್ತಾಯಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next