Advertisement

ಕೋಟದಲ್ಲಿ ಡಬಲ್ ಮರ್ಡರ್

02:43 AM Jan 27, 2019 | Karthik A |

ಉಡುಪಿ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

Advertisement

ಕೋಟ ನಿವಾಸಿಗಳಾದ ಭರತ್ ಮತ್ತು ಯತೀಶ್ ಅವರೇ ಕೊಲೆಯಾದ ನತದೃಷ್ಟ ಯುವಕರಾಗಿದ್ದಾರೆ. ಮೆಹಂದಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಕೋಟದ ರಾಜಲಕ್ಷ್ಮೀ ಸಭಾಂಗಣದ ಸಮೀಪವೇ ವಾಹನದಲ್ಲಿ ಬಂದ ಹಂತಕರು ಭರತ್ ಮತ್ತು ಯತೀಶ್ ಮೇಲೆ ಮಾರಕಾಸ್ತ್ರಗಳಿಂದ ಯದ್ವಾ ತದ್ವಾ ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.


Advertisement

Udayavani is now on Telegram. Click here to join our channel and stay updated with the latest news.

Next