Advertisement

ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ಗ್ರಾಮ ಪಂಚಾಯಿತಿ ಸದಸ್ಯನಿಗೆ ಕೊಲೆ ಬೆದರಿಕೆ?

12:04 PM Jul 17, 2021 | Team Udayavani |

ಚಿಕ್ಕಮಗಳೂರು : ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ನನಗೆ ಕೊಲೆ ಬೆದರಿಕೆ ಬಂದಿದೆ ಎಂದು ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್  ಆರೋಪ ಮಾಡಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್ ಪ್ರವಾಹ ಪರಿಹಾರದ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲೇ ಕೊಲೆ ಬೆದರಿಕೆ ಬಂದಿದೆ ಎಂದು ಆರೋಪ ಕೇಳಿ ಬಂದಿದೆ.

ಫೇಸ್ಬುಕ್ ನಲ್ಲಿ ನಾನು ಹಾಕಿದ್ದ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ. ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದಾರೆ ಎಂದು ಸಚಿನ್ ಶಾಸಕರ ವಿರುದ್ಧ ಆರೋಪ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next