Advertisement

ಕೋವಿಡ್‌ ಸೋಂಕಿಗೆ ಗಣಿ ಅಧಿಕಾರಿ ವಿಲಾಸಿನಿ ಸಾವು : ಕಂಬನಿ ಮಿಡಿದ ನಿರಾಣಿ

07:33 PM Apr 30, 2021 | Team Udayavani |

ಬೆಂಗಳೂರು: ಭೂವಿಜ್ಞಾನ ಇಲಾಖೆಯ ಗೆಜೆಟೆಡ್‌ ಮ್ಯಾನೇಜರ್‌ ವಿಲಾಸಿನಿ ಕರಿನಿಂಗ್‌ (48) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Advertisement

ಸೋಂಕಿಗೆ ಕೊನೆಯುಸಿರೆಳೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಗೆಜೆಟೆಡ್‌ ಮ್ಯಾನೇಜರ್‌ ವಿಲಾಸಿನಿ ಕರಿನಿಂಗ್‌ (48) ಅವರ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ತೀವ್ರ ಕಂಬನಿ ಮಿಡಿದಿದ್ದಾರೆ.

ಕಳೆದ 25 ವರ್ಷಗಳಿಂದ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪ್ರಸ್ತುತ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ಗೆಜೆಟೆಡ್‌ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದೆ ಅವರಿಗೆ ಕರೋನಾ ಸೋಂಕು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಮಂಗಳವಾರ ವಿಲಾಸಿನಿ ಕಾರ್ನಿಂಗ್‌ ಅವರು ಸಾವನ್ನಪ್ಪಿದರು.

ಇದನ್ನೂ ಓದಿ :ಕೋವಿಡ್ ಕರ್ಫ್ಯೂ ಹಿನ್ನೆಲೆ : ವಿಜಯಪುರ ತೋಟಗಾರಿಕೆ ಬೆಳೆಗಾರರಿಗೆ ಸಹಾಯವಾಣಿ

Advertisement

ಮೃತರ ಆತ್ಮಕ್ಕೆ ಶಾಂತಿ ಸಿಕ್ಕು, ಭಗವಂತನು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಚಿವ ನಿರಾಣಿ ಅವರು ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next