Advertisement

ಬಿಜೆಪಿ ಹಿರಿಯ ಮುಖಂಡ ಸಿ.ಗುರುಸ್ವಾಮಿ ನಿಧನಕ್ಕೆ ಮುರುಗೇಶ್ ನಿರಾಣಿ ಸಂತಾಪ ಸೂಚನೆ

01:28 PM Aug 19, 2020 | Mithun PG |

ಬೆಂಗಳೂರು: ಮಾಜಿ ಸಚಿವ ಹಾಗೂ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುರುಗೇಶ್ ನಿರಾಣಿ, ಬಿಜೆಪಿ ಹಿರಿಯ ಮುಖಂಡರಾದ ಸಿ.ಗುರುಸ್ವಾಮಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement

ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ಹಿರಿಯ ಮುಖಂಡರಾದ ಸಿ. ಗುರುಸ್ವಾಮಿ ಅವರು ಅನುಭವಿ ಹಾಗೂ ಜನಾನುರಾಗಿ ರಾಜಕಾರಣಿಯಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರಲ್ಲದೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿಯ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇವರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ಅತ್ಯಂತ ದುಖದ ವಿಚಾರವಾಗಿದ್ದು, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು  ಮುರುಗೇಶ್ ಆರ್ ನಿರಾಣಿ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next