Advertisement

ಜಾರಕಿಹೊಳಿ ಶೀಘ್ರ ಆರೋಪ ಮುಕ್ತ : ಮುರುಗೇಶ ನಿರಾಣಿ

05:56 PM Mar 12, 2021 | Team Udayavani |

ಧಾರವಾಡ : ರಮೇಶ್ ಜಾರಕಿಹೊಳಿ ಕುರಿತ ರಾಸಲೀಲೆ ವಿಡಿಯೋ ನಕಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ತನಿಖೆಗೂ ಸಹ ಸರ್ಕಾರ ಸೂಚಿಸಿದೆ. ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು.

Advertisement

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಗೆ ತನ್ನದೇ ಆದ ರೀತಿ, ನಿಯಮಗಳಿರುತ್ತವೆ ಆ ಪ್ರಕಾರ ತನಿಖೆ ನಡೆಸುತ್ತದೆ. ರಮೇಶ್ ಅವರು ಆರೋಪ ಮುಕ್ತರಾಗಿ ಹೊರ ಬಂದರೆ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದರು.

ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ನಿರಾಣಿ, ಈ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು ಎಂಬುದು ನನ್ನ ಅಭಿಪ್ರಾಯವೂ ಹೌದು. ಈ ಬಗ್ಗೆ ಹಿಂದುಳಿದ ಆಯೋಗ ಸ್ಪಷ್ಟವಾಗಿ ಅಧ್ಯಯನ ನಡೆಸಿ ವರದಿ ನೀಡಲು ಈಗಾಗಲೇ ಸರ್ಕಾರ ಸೂಚನೆ ನೀಡಿದೆ. ಇದು ಆದಷ್ಟು ಬೇಗ ಆಗಲಿದೆ. ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹಾಗೆ ಹೆಲಿಕಾಪ್ಟರ್ ನಲ್ಲಿ ಅಡ್ಡಾಡುವವರು ನಮ್ಮಲ್ಲಿಲ್ಲ.

ಎಲ್ಲಾ ಸಮುದಾಯಗಳಿಗೆ ಸೌಲಭ್ಯಗಳು ಸಿಗಲಿ ಎಂಬುದು ನಮ್ಮ ಉದ್ದೇಶ. ಪಂಚಮಸಾಲಿ ಸಮಾಜದಲ್ಲಿ 80 ಲಕ್ಷ ಜನರಿದ್ದು ಅವರೆಲ್ಲರೂ ನಾಯಕರೇ ಆಗಿದ್ದಾರೆ. ಇಲ್ಲಿ ಯಾರೂ ನಾಯಕರಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next