Advertisement

ದಾವೂದ್ ಬಗ್ಗೆ ನಾವ್ಯಾಕೆ ಭಾರತಕ್ಕೆ ಸಹಾಯ ಮಾಡಬೇಕು?

11:53 AM Aug 31, 2017 | Sharanya Alva |

ಲಾಹೋರ್:ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಿರುವ ಬಗ್ಗೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಪರೋಕ್ಷ ಸೂಚನೆ ನೀಡಿದ್ದಾರೆ. ಆದರೆ ನಾವು ಯಾಕೆ ಭಾರತಕ್ಕೆ ಸಹಾಯ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

Advertisement

ಪಾಕಿಸ್ತಾನ ನ್ಯೂಸ್ ಚಾನೆಲ್ ಗೆ ಸಂದರ್ಶನ ನೀಡಿರುವ ಮುಷರ್ರಫ್, ದೀರ್ಘಕಾಲದಿಂದ ಭಾರತ ಪಾಕಿಸ್ತಾನದ ಮೇಲೆ ಗೂಬೆ ಕೂರಿಸುತ್ತಾ ಬಂದಿದೆ. ನಾವ್ಯಾಕೆ ಈಗ ಒಳ್ಳೆಯವರಾಗಿ ಸಹಾಯ ಮಾಡಬೇಕು? ದಾವೂದ್ ಈಗ ಎಲ್ಲಿದ್ದಾನೆ ಎಂದು ನನಗೆ ಗೊತ್ತಿಲ್ಲ. ಒಂದು ಆತ ಇಲ್ಲಿಯೇ(ಕರಾಚಿ) ಇರಬೇಕು, ಇಲ್ಲವೇ ಬೇರೆಲ್ಲೋ ಇರಬೇಕು ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಮುಸ್ಲಿಮರ ಹತ್ಯೆಗೈಯಲಾಗಿದೆ. ಅದಕ್ಕಾಗಿ ದಾವೂದ್ ಇಬ್ರಾಹಿಂ ಪ್ರತೀಕಾರ ತೀರಿಸಿಕೊಂಡಿದ್ದಾನೆ ಎಂದು ಹೇಳುವ ಮೂಲಕ ಮುಷರ್ರಫ್, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಪಾಕಿಸ್ತಾನದಲ್ಲೇ ಇರುವ ಬಗ್ಗೆ ಪರೋಕ್ಷ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next