Advertisement

ಸಂಗೀತದಿಂದ ಜೀವನಕ್ಕೆ ಉಲ್ಲಾಸ ಸಾಧ್ಯ

03:17 PM Feb 07, 2022 | Team Udayavani |

ಬೀದರ: ಮನಸ್ಸಿಗೆ ಚೈತನ್ಯ ನೀಡಿ, ಜೀವನಕ್ಕೆ ಉಲ್ಲಾಸ ತುಂಬುವ ಶಕ್ತಿ ಸಂಗೀತಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

Advertisement

ಅಕ್ಕಮಹಾದೇವಿ ಮಹಿಳಾ ಜಾನಪದ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ತಾಲೂಕಿನ ಕಂಗನಕೋಟ ಗ್ರಾಮದ ಅಕ್ಕಮಹಾದೇವಿ ಮಂದಿರದಲ್ಲಿ ನಡೆದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಿ ಮನರಂಜನೆಯ ಜೊತೆಗೆ ಕನ್ನಡ ಭಾಷೆ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಮಾತನಾಡಿ, ಅಕ್ಕಮಹಾದೇವಿ ಮಹಿಳಾ ಸಂಸ್ಥೆ ಉತ್ತಮ ಸಾಂಸ್ಕೃತಿಕ ಚಟುವಟಿಕೆಗಳು ನಡೆಸುತ್ತಿದೆ ಎಂದು ಹೇಳಿದರು.

ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಮಾತನಾಡಿದರು. ಸಾಹಿತಿ ಓಂಕಾರ ಪಾಟೀಲ, ಗ್ರಾಪಂ ಸದಸ್ಯರಾದ ಅವೀರ ಸಾವಂತ, ಕೃಷ್ಣಮ್ಮ ಪುಂಡಲಿಕ, ಸುರೇಶ ಪಾಟೀಲ ಇದ್ದರು. ಗಣಪತಿ ಶಂಭು ಪ್ರಾಸ್ತಾವಿಕ ಮಾತನಾಡಿದರು. ಗೀತಾ ಭುಳ್ಳಾ ತಂಡದಿಂದ ಸಂಗೀತ, ಪುತಳಾಬಾಯಿ ತಂಡದಿಂದ ಸಂಪ್ರದಾಯಿಕ ಪದ, ನಿರ್ಮಲಾಬಾಯಿ ಶಂಭು ತಂಡದಿಂದ ತತ್ವಪದ, ಶಂಕರಯ್ನಾ ಸ್ವಾಮಿ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next