Advertisement

ಸಂಗೀತ ನಿರ್ದೇಶಕರೇ ಗಾಯಕರು!

10:36 AM Aug 02, 2017 | |

ಸಂಗೀತ ನಿರ್ದೇಶಕ ರವಿ ಬಸ್ರೂರು “ಕಟಕ’ ಎಂಬ ಸಿನಿಮಾ ನಿರ್ದೇಶಿಸಿರುವ ವಿಷಯ ನಿಮಗೆ ಗೊತ್ತೇ ಇದೆ.  ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ರವಿ ಬಸ್ರೂರು ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆ ಮಾಡಿದ್ದಾರೆ. ಈ ಟೈಟಲ್‌ ಟ್ರ್ಯಾಕ್‌ನ ವಿಶೇಷವೆಂದರೆ ಆರು ಮಂದಿ ಸಂಗೀತ ನಿರ್ದೇಶಕರು ಈ ಟೈಟಲ್‌ ಟ್ರ್ಯಾಕ್‌ಗೆ ಧ್ವನಿಯಾಗಿದ್ದಾರೆ.

Advertisement

ಸಂಗೀತ ನಿರ್ದೇಶಕರಾದ ಅರ್ಜುನ್‌ ಜನ್ಯ, ಚಂದನ್‌ ಶೆಟ್ಟಿ, ಭರತ್‌ ಬಿ.ಜೆ, ಶ್ರೀಧರ್‌ ಸಂಭ್ರಮ್‌, ವೀರ್‌ ಸಮರ್ಥ್, ಚರಣ್‌ ರಾಜ್‌ ಧ್ವನಿ ಕೊಟ್ಟಿದ್ದಾರೆ. “ಕಣ್ಣಾರೆ ಕಾಣೋ ಲೋಕ…’ ಎಂದು ಆರಂಭವಾಗುವ ಈ ಟೈಟಲ್‌ ಟ್ರ್ಯಾಕ್‌ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ವಾಮಾಚಾರ ಸುತ್ತ ನಡೆಯುವ ಸಿನಿಮಾ “ಕಟಕ’. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾ.

ಐದು ವರ್ಷದ ಬಾಲಕಿಯೊಬ್ಬಳ ಮೇಲೆ ವಾಮಾಚಾರ ಪ್ರಯೋಗವಾದಾಗ ಏನೆಲ್ಲಾ ಆಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಸೌಂಡಿಂಗ್‌ ತುಂಬಾ ವಿಭಿನ್ನವಾಗಿರಬೇಕು, ಕಥೆಯನ್ನು ಮತ್ತೂಂದು ಎತ್ತರಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಹಾಲಿವುಡ್‌ ಚಿತ್ರಗಳ ಸೌಂಡಿಂಗ್‌ನಲ್ಲಿ ಕೆಲಸ ಮಾಡುವ ಸುಮಾರು 14 ಕಂಪೆನಿಗಳು ಈ ಚಿತ್ರಕ್ಕೆ ಸೌಂಡ್‌ ಎಫೆಕ್ಟ್ ನೀಡಿವೆ.  

ಶ್ಲಾಘ ಸಾಲಿಗ್ರಾಮ ಎಂಬ ಬಾಲಕಿ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವನ್ನು ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಿಸಿದ್ದಾರೆ. ಈ ಹಿಂದೆ “ಜಟ್ಟ’, “ಮೈತ್ರಿ’ ಸಿನಿಮಾಗಳನ್ನು ನಿರ್ಮಿಸಿರುವ ಎನ್‌.ಎಸ್‌.ರಾಜ್‌ಕುಮಾರ್‌ ಅವರು ಈಗ “ಕಟಕ’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸಚಿನ್‌ ಬಸ್ರೂರು ಛಾಯಾಗ್ರಹಣವಿದೆ. ಇಡೀ ಸಿನಿಮಾ ಕರಾವಳಿಯಲ್ಲಿ ಚಿತ್ರೀಕರಣವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next