Advertisement

ಅಲ್‌ಖೈದಾ ಬೆಂಬಲ; ಹಿಂದೂ ಹುಡುಗರಿಂದಾಗಿ ಮುಸ್ಕಾನ್ ಸುರಕ್ಷಿತ : ಸಿ.ಟಿ.ರವಿ

06:35 PM Apr 06, 2022 | Team Udayavani |

ಬೆಂಗಳೂರು: ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ”ಆವತ್ತು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ ಹುಡುಗರು” ಎಂದು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ”ಹಿಂದೂ ಹುಡುಗರ‌ ಜಾಗದಲ್ಲಿ ಮುಸ್ಲಿಂ ಹುಡುಗರು, ಹಿಂದೂ ಹುಡುಗಿ ಇದ್ದಿದ್ದರೆ ಆಕೆ ಸುರಕ್ಷಿತವಾಗಿ ಹೋಗುತ್ತಿರಲಿಲ್ವೇನೋ? ಯಾಕೆಂದರೆ ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು ಆದರೆ ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ. ಹಾಗಾಗಿ ಆಕೆ ಬಚಾವಾಗಿದ್ದಾಳೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಹಿಜಾಬ್ ಸಮವಸ್ತ್ರಕ್ಕೆ ಮಾತ್ರ ವಿರೋಧ ಇಲ್ಲ ಅನ್ನುವುದು ಗೊತ್ತಾಗಿದೆ. ಸಮಾಜ ಒಡೆಯುವ ಸಂಚು ಇದೆ ಅನ್ನಿಸುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೀಬೇಕು. ಹಿಜಾಬ್ ವಿವಾದದ ಹಿಂದೆ ಬೇರೆಯದೇ ಸಂಚು ಇದೆ ಅನ್ನಿಸುತ್ತದೆ. ನೂರಾರು ಸಂಸ್ಕೃತಿ, ವೈವಿಧ್ಯತೆಯ ರಾಷ್ಟ್ರ ಭಾರತ ವನ್ನು ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ” ಎಂದರು.

ಇದನ್ನೂ ಓದಿ : ಮಂಡ್ಯದ ಮುಸ್ಕಾನ್ ಹಾಡಿ ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ !

ಹತ್ಯೆ ಮಾಡಿರುವುದು ಮುಸಲ್ಮಾನರು

Advertisement

ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಚಂದ್ರು ಹತ್ಯೆ ಆಗಿರುವುದು ನಿಜ. ಕನ್ನಡ ಮಾತಾಡಿದ ಅಂತ ಹತ್ಯೆ ಆಯ್ತು ಎಂದು ಕೆಲವರು ಹೇಳುತ್ತಿದ್ದಾರೆ. ಪೊಲೀಸರು ಎರಡೂ ರೀತಿಯ ವರದಿ ಕೊಡುತ್ತಿದ್ದಾರೆ. ಹತ್ಯೆ ಆಗಿರುವುದು ನಿಜ. ಹತ್ಯೆ ಮಾಡಿರುವುದು ಮುಸಲ್ಮಾನರು, ಅದೂ ನಿಜ.ಸತ್ತಿರುವವನು ಹಿಂದೂ, ಅದೂ ನಿಜ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next