Advertisement

ಜಿಲ್ಲಾಡಳಿತ ನಿರ್ಧಾರಕ್ಕೆ ಮುಸ್ಲಿಂ ಮುಖಂಡರ ಆಕ್ರೋಶ

11:56 AM Nov 06, 2017 | |

ಜೇವರ್ಗಿ: ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ನ.10 ರಂದು ಆಯೋಜಿಸಲಾಗಿರುವ ಟಿಪ್ಪು ಸುಲ್ತಾನ ಜಯಂತಿ ಅಂಗವಾಗಿ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಸಹಾಯಕ ಆಯುಕ್ತ ರಾಜಪ್ಪ, ತಹಶೀಲ್ದಾರ್‌ ಯಲ್ಲಪ್ಪ ಸುಬೆದಾರ, ಲೋಕೋಪಯೋಗಿ ಇಲಾಖೆ ಎಇಇ ಪಲ್ಲಾ ಸತ್ಯಶೀಲರೆಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.

Advertisement

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ, ಬರುವ ನ.10 ರಂದು ತಾಲೂಕಾಡಳಿತದ ವತಿಯಿಂದ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ಗಂಟೆಗೆ ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ಮೆರವಣಿಗೆ ಹಾಗೂ ಜಯಂತಿಗೆ ಸಂಬಂಸಿದ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಕಟೌಟ್‌ಗಳನ್ನು ಹಾಕದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಅಲ್ಲದೇ ಅಂದು ಜಿಲ್ಲಾದ್ಯಂತ 144 ಕಲಂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಟಿಪ್ಪು ಅಭಿಮಾನಿಗಳು ಹಾಗೂ ಮುಸ್ಲಿಂ ಬಾಂಧವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ನಂತರ ಗದ್ದಲ ಎಬ್ಬಿಸಿದ ಮುಸ್ಲಿಂ ಮುಖಂಡರು ಕಾಟಾಚಾರಕ್ಕೆ ಟಿಪ್ಪು ಸುಲ್ತಾನ ಜಯಂತಿ ಆಚರಿಸುತ್ತಿದ್ದೀರಾ ? ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೈಸೂರು ಹುಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆ ಮಾಡುವುದಕ್ಕೆ ಅಡೆತಡೆ ಉಂಟು ಮಾಡುತ್ತಿರುವ ಜಿಲ್ಲಾಡಳಿತ ನಿರ್ಧಾರಕ್ಕೆ ಧಿಕ್ಕಾರ ಕೂಗಿದರು. ನ.10 ರಂದು ನಡೆಯುವ ಟಿಪ್ಪು ಸುಲ್ತಾನ ಜಯಂತಿ ಅದ್ಧೂರಿಯಿಂದ ಆಚರಣೆ ಮಾಡಬೇಕು. ಆಚರಣೆಗೆ ಯಾವುದೇ ನಿರ್ಬಂಧ ಹೇರಬಾರದು ಎಂದು ಆಗ್ರಹಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.

ತಾಪಂ ಮಾಜಿ ಅಧ್ಯಕ್ಷ ಅಮೀರ ಹಮ್ಜಾ ಲಖಣಾಪುರ, ಮಹಿಬೂಬ ಪಾಶಾ ಕೋಬಾಳ, ಕಾಶಿಂ ಕೂಡಿ, ಮಹಿಬೂಬಸಾಬ ಕೆಂಭಾವಿ, ಮಹಿಬೂಬ ಮನಿಯಾರ ಮಳ್ಳಿ, ಬಸೀರ್‌ ಇನಾಮದಾರ, ಹಬೀಬ ಜಮಾದಾರ, ಗೌಸ್‌ ಮೈನೋದ್ದೀನ್‌ ಖಾದ್ರಿ ಗಂವ್ಹಾರ, ಬಾಬು ಪಾಟೀಲ ಮುತ್ತಕೋಡ, ಭಗವಂತ್ರಾಯ ಬೆಣ್ಣೂರ, ಇಬ್ರಾಹಿಂ ಪಟೇಲ ಹಾಗೂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next