Advertisement

Ram Mandir; ಮುಸ್ಲಿಂ ಪ್ರೀತಿ, ಹಿಂದೂ ವಿರೋಧಿ ನಡೆ: ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

05:33 PM Jan 02, 2024 | Team Udayavani |

ಹುಬ್ಬಳ್ಳಿ: ಹೆಸರಲ್ಲಿ ರಾಮ ಇದ್ದರೆ ಸಾಲದು, ರಾಮನಂತೆ ನಡೆದುಕೊಳ್ಳಬೇಕು. ಆದರೆ ಅವರು ರಾವಣನಂತೆ ನಡೆದುಕೊಳ್ಳುತ್ತಿದ್ದಾರೆ. ಮುಸ್ಲಿಂ ಪ್ರೀತಿ, ಹಿಂದೂ ವಿರೋಧಿ ನಡೆ ಅವರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರದ ಉದ್ಘಾಟನೆಗೊಳ್ಳುತ್ತಿರುವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ಇವರ ನಡೆ ನೇರವಾಗಿ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಮಮಂದಿರ ಅಂದರೆ ಇವರಿಗ್ಯಾಕೆ ಹೊಟ್ಟೆಕಿಚ್ಚು ಎಂಬುವುದು ಅರ್ಥವಾಗುತ್ತಿಲ್ಲ. 31 ವರ್ಷದ ಹಿಂದಿನ ಪ್ರಕರಣದಲ್ಲಿ ಈಗ ಬಂಧಿಸಿರುವುದು ರಾಜ್ಯ ಸರಕಾರದ ಮನಸ್ಥಿತಿ ಸ್ಪಷ್ಟವಾಗಿದೆ. ಹಿಂದೂ ಪರ ಕಾರ್ಯಕರ್ತರು ಇವರ ಟಾರ್ಗೆಟ್ ಆಗಿದ್ದಾರೆ. ಇಂತಹ ಮನಸ್ಥಿತಿಯನ್ನು ನಾವು ಒಪ್ಪಲು ಸಾಧ್ಯವಿಲ್ಲ. ನೀವು ಯಾವ ರಾಜ್ಯದಲ್ಲಿದ್ದೀರಿ ಎಂಬುವುದನ್ನು ತಿಳಿದುಕೊಳ್ಳಬೇಕು. ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಈ ಪ್ರಕರಣದಲ್ಲಿ ಯಾರನ್ನು ಬಂಧನ ಮಾಡದಂತೆ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ತಿಳಿಸಿದ್ದೆ. ಆದರೂ 31 ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನ ಮಾಡಿದ್ದಾರೆ. ಇದರ ಹಿಂದೆ ರಾಜ್ಯ ಸರಕಾರದ ನಿರ್ದೇಶನ ಇರುವುದು ಸ್ಪಷ್ಟವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next