Advertisement

ಮುಸ್ಲಿಂ ವ್ಯಾಪಾರ ನಿರ್ಬಂಧ; ಕಾನೂನು ಭಂಗವಾದರೆ ಕ್ರಮ: ಆರಗ ಜ್ಞಾನೇಂದ್ರ

12:04 PM Apr 06, 2022 | Team Udayavani |

ಬೆಂಗಳೂರು: ಹಿಜಾಬ್‌ನಿಂದ ಪ್ರಾರಂಭವಾಗಿ ಬೇರೆ ಬೇರೆ ವಿಚಾರಗಳ ಕುರಿತಾಗಿ ಚರ್ಚೆ ನಡೆಯುತ್ತಿದ್ದು, ಇವುಗಳಿಂದ ಕಾನೂನು ಸುವ್ಯವಸ್ಥೆ ಗೆ ಭಂಗ ಬಂದರೆ ಗೃಹ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಪರ ಸಂಘಟನೆಗಳಿಂದ ಮುಸ್ಲಿಂ ವ್ಯಾಪಾರ ನಿರ್ಬಂಧ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ಹೇಳಿಕೆ ನೀಡಿದ್ದಾರೆ. ಅಲ್ಲಲ್ಲಿ ಅನೇಕ‌ ಹೇಳಿಕೆಗಳು ಬರುತ್ತಿವೆ. ಸರ್ಕಾರ, ಗೃಹ ಇಲಾಖೆ ಎಲ್ಲದರ ಮೇಲೆ ಕಣ್ಣಿಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡುವ ಯಾವುದೇ ವಿಚಾರ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಗುಂಡ್ಯ ಕಾಡು ಮೇಡುಗಳಲ್ಲಿ ಅಲೆದಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಪತ್ತೆ

ಕಾಂಗ್ರೆಸ್ ಮತ್ತು‌ ಜೆಡಿಎಸ್ ನವರು ಅಲ್ಪಸಂಖ್ಯಾತರ ಮತಗಳಿಗೆ ಬಲೆ ಬೀಸಿ‌ ಕೂತಿದ್ದಾರೆ. ಅವರಿಗೆ ಬೇರೇನೂ ಬೇಡ. ಜನರ ನೆಮ್ಮದಿ ಬೇಕಾಗಿಲ್ಲ. ಜನಕ್ಕೆ ಸತ್ಯ ಹೇಳುವುದೂ ಬೇಕಾಗಿಲ್ಲ. ಎರಡೂ ಪಕ್ಷಗಳು ಓಲೈಕೆ ರಾಜಕಾರಣದಲ್ಲಿ ಕಳೆದು ಹೋಗುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next