Advertisement

ಸಿಹಿ ಹಂಚಿದ್ದೇ ತಪ್ಪಾಯಿತು.! ಬಿಜೆಪಿ ಬೆಂಬಲಿಸಿದ್ದಕ್ಕೆ ಮುಸ್ಲಿಂ ಯುವಕನ ಹತ್ಯೆ

08:28 PM Mar 28, 2022 | Team Udayavani |

ಲಕ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪಕ್ಷದ ವಿಜಯವನ್ನು ಸಂಭ್ರಮಿಸಿದ್ದ ಎನ್ನುವ ಕಾರಣಕ್ಕೇ ಮುಸ್ಲಿಂ ಯುವಕನನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯಲ್ಲಿ ನಡೆದಿದೆ.

Advertisement

ಬಾಬರ್‌ ಅಲಿ(25) ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ. ಹಾಗೆಯೇ ಮಾ.10ರಂದು ಫ‌ಲಿತಾಂಶ ಹೊರಬಿದ್ದ ನಂತರ ಸುತ್ತಮುತ್ತಲಿನ ಮನೆಯವರಿಗೆಲ್ಲ ಸಿಹಿ ಹಂಚಿದ್ದ. ಈ ಹಿನ್ನೆಲೆ ಮಾ.20ರಂದು ಆತನ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ದೇಶದ ಸರಕಾರ ಶ್ರೀಮಂತರ ಪರವಾಗಿದ್ದು, ಸಂವಿಧಾನ ವಿರೋಧಿಯಾಗಿವೆ : ನಟ ಚೇತನ್

ಗಂಭೀರ ಗಾಯಗೊಂಡಿದ್ದ ಆತ ಮಾ.27ರಂದು ಲಕ್ನೋದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆತನಿಗೆ ಬಿಜೆಪಿ ಪರವಾಗಿ ಪ್ರಚಾರ ಮಾಡದಂತೆ ಅಕ್ಕ ಪಕ್ಕದ ಮನೆಯವರು ಈ ಹಿಂದೆಯೇ ಎಚ್ಚರಿಕೆ ಕೊಟ್ಟಿದ್ದರು ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ ಈ ಕೊಲೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next