Advertisement

ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ ಅಧಿಕಾರಿಗಳು: ಉಡುಪಿ ಜಿಲ್ಲಾಧಿಕಾರಿ ಗರಂ

12:52 PM Dec 26, 2020 | keerthan |

ಕುಂದಾಪುರ: ಕೋವಿಡ್ ನಿಯಾಮವಳಿಗಳನ್ನು ಗಾಳಿಗೆ ತೂರಿ ಗ್ರಾಮ ಪಂಚಾಯತಿ ಚುನಾವಣೆಯ ಮಸ್ಟರಿಂಗ್ ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಗಳ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಗರಂ ಆದ ಘಟನೆ ಶನಿವಾರ ಕುಂದಾಪುರದಲ್ಲಿ ನಡೆಯಿತು.

Advertisement

ಇಲ್ಲಿನ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ‌ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ. ಆದರೆ ಈ ವೇಳೆ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಿದರು.

ಇದನ್ನೂ ಓದಿ:ಮತಗಟ್ಟೆ ಅಧಿಕಾರಿಗೆ ಸೋಂಕು ದೃಢ : ಚುನಾವಣಾ ಕಾರ್ಯದಲ್ಲಿ ಜೊತೆಗಿದ್ದ ಅಧಿಕಾರಿಗಳಲ್ಲಿ ಆತಂಕ

ರವಿವಾರ (ಡಿ.27) ದಂದು ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಡಿ.22ರಂದು ನಡೆದಿದ್ದು. ಡಿ.30ರಂದು ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next