Advertisement

ಪ್ರವೀಣ್ ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ, ತಪ್ಪಿದರೆ ಸಿಎಂ ಮುಖಕ್ಕೆ ಮಸಿ : ಮುತಾಲಿಕ್

03:43 PM Sep 19, 2022 | Team Udayavani |

ಸುಳ್ಯ : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

Advertisement

ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದ ರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್ ಮೇಸ್ತಾ, ಶರತ್ ಮಡಿವಾಳ ಅವರಿಗೆ ನೀಡಿದ ಘೋಷಣೆ ಈಡೇರಲಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಮಾತು ತಪ್ಪಿದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಸಾವಿರಾರು ಜನ ಸೇರಿಸಿ ಧರಣಿ ಕೂತು, ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾದಿತು ಎಂಬ ಎಚ್ಚರಿಕೆಯನ್ನು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.

ಕೃತ್ಯ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅವರಿಗೆ ಎಂದಿಗೂ ಜಾಮೀನು ದೊರೆಯದಂತೆ ನೋಡಿಕೊಳ್ಳಬೇಕು. ಈ ಹಿಂದೆಯೇ ನಾನು ಇಲ್ಲಿಗೆ ಭೇಟಿ ನೀಡುವ ವೇಳೆ ನಿಷೇಧ ಹೇರಿದ್ದನ್ನು ನಾನು ಖಂಡಿಸುತ್ತೇನೆ ಎಂದರು.

ಇದನ್ನೂ ಓದಿ : ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ

Advertisement
Advertisement

Udayavani is now on Telegram. Click here to join our channel and stay updated with the latest news.

Next