Advertisement

ಮೊದಲ ಪತ್ನಿ ಸಮಾಧಿ ಪಕ್ಕದಲ್ಲಿ ಮುತ್ತಪ್ಪ ರೈ ಅಂತ್ಯಕ್ರಿಯೆ

08:41 AM May 16, 2020 | keerthan |

ಬೆಂಗಳೂರು: ಅನಾರೋಗ್ಯದಿಂದ ಇಂದು ಮೃತಪಟ್ಟ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪಾರ್ಥಿವ ಶರೀರವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕೊಂಡೊಯ್ಯಲಾಯಿತು.

Advertisement

ಮುಂಭಾಗದಲ್ಲಿ ಒಂದು ಪೊಲೀಸ್ ವಾಹನ ಹಿಂಭಾಗ ಕೆಎಸ್ಆರ್ ಪಿ ತುಕಡಿ ನಿಯೋಜಿಸಲಾಗಿತ್ತು. ರಸ್ತೆ ಮಧ್ಯೆ ಯಾರಿಗೂ ದರ್ಶನಕ್ಕೆ ಅವಕಾಶ ಇರಲಿಲ್ಲ. ಜಯಕರ್ನಾಟಕ ಸಂಘಟನೆಯ ಬಾವುಟಗಳು ರಸ್ತೆಯುದ್ದಕ್ಕೂ ರಾರಾಜಿಸಿದವು.

ನೂರಾರು ಕಾರ್ಯಕರ್ತರು ಪಾರ್ಥಿವ ಶರೀರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸಾಮಾಜಿಕ ಅಂತರ ಇಲ್ಲದರಿಂದ ಪೊಲೀಸರು ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಎಂದು ಸೂಚಿಸುತ್ತಿದದ್ದು ಕಂಡು ಬಂತು.

ಮಾಗಡಿಯಲ್ಲಿರುವ ಅವರ ಮನೆ ಸಮೀಪದಲ್ಲಿಯೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮೊದಲ ಪತ್ನಿ ಸಮಾಧಿ ಪಕ್ಕದಲ್ಲೇ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next