Advertisement

ಮಠಕ್ಕೂ, ಸ್ಟೇ ಬಂದಿರುವ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ : ಪೂರ್ಣಾನಂದ ಪುರಿ ಸ್ವಾಮೀಜಿ

01:59 PM May 14, 2022 | Team Udayavani |

ನೆಲಮಂಗಲ: ನಾಳೆ ಭಾನುವಾರ ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ ಎಂದು ಪೂರ್ಣಾನಂದ ಪುರಿ ಸ್ವಾಮೀಜಿ (ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ) ಹೇಳಿಕೆ ನೀಡಿದ್ದಾರೆ.

Advertisement

ನಗರೂರಿನ ಮಠದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮಿಗಳು, ನಮ್ಮದು ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ. ಇಲ್ಲಸಲ್ಲದ ಸುಳ್ಳು ಸುದ್ದಿ ಹರಡಾಡಿದೆ. ಇದಕ್ಕೆ ಗಮನಹರಿಸಬೇಡಿ. ನಾಳೆ 11.30 ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಅಪಾರ ಜನರು ಮಠದ ಭಕ್ತರು ಬರಲಿದ್ದಾರೆ. ಈ ರೀತಿಯಲ್ಲಿ ಸುಳ್ಳು ಸುದ್ದಿಯಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಂದಿದ್ದಾರೆ. ಕೇವಲ ಅಪ ಪ್ರಚಾರ ಮಾಡಿ ಮನಸ್ಸಿಗೆ ಹಾಗೂ ಮಠಕ್ಕೆ ನೋವು ಮಾಡಿದ್ದಾರೆ ಎಂದರು.

ನಮ್ಮ ಮಠಕ್ಕೂ ಸ್ಟೇ ಬಂದಿರುವ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.

ಸಿಎಂ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ. 30 ಸಾವಿರಕ್ಕೂ ಹೆಚ್ಚು ಜನಾಂಗದ ಜನರು ಭಾಗಿಯಾಗಲಿದ್ದಾರೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next