Advertisement

ಚಿಕ್ಕಮಗಳೂರು ರೆಸಾರ್ಟ್ ಭೇಟಿ ಮೊದಲೇ ನಿಗದಿಯಾಗಿತ್ತು: ರಮೇಶ್ ಜಾರಕಿಹೊಳಿ ಸ್ಪಷ್ಟನೆ

12:52 PM Jan 26, 2021 | Team Udayavani |

ಬೆಳಗಾವಿ: ಚಿಕ್ಕಮಗಳೂರು ಪ್ರವಾಸ ಒಂದು ವಾರ ಮೊದಲೇ ನಿಗದಿಯಾಗಿತ್ತು. ರೆಸಾರ್ಟ್ ವಾಸ್ತವ್ಯ, ನನ್ನ ಪ್ರವಾಸದ ಮಾಹಿತಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮೊದಲೇ ಕಳುಹಿಸಲಾಗಿತ್ತು. ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಮಾಹಿತಿಯೇ ನನಗಿರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದರು.

Advertisement

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಮಾರ್ಚ್ ನಂತರ ಸಂಪುಟ ಪುನಾರಚನೆ ಸಾಧ್ಯತೆಯಿದ್ದು ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ:ಕೃಷಿ ಕಾಯ್ದೆ ವಿರುದ್ಧ ಟ್ರ್ಯಾಕ್ಟರ್ Rally, ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ

ಅಭಯ ಪಾಟೀಲ ಕೂಡ ಸಚಿವಾಕಾಂಕ್ಷಿ ಆಗಿದ್ದಾರೆ. ಎಲ್ಲರೂ ನನ್ನ ಸ್ನೇಹಿತರೇ, ಯಾರಿಗಾದರೂ ಸಿಗಲಿ ಸಂತೋಷ ಎಂದು ಹೇಳಿದರು.

ಇದನ್ನೂ ಓದಿ:ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಪ್ರಧಾನಿ ಹಸಿರು ನಿಶಾನೆ ? ಫೆ.25ರೊಳಗೆ ಉದ್ಘಾಟನೆ ಸಾಧ್ಯತೆ

Advertisement

ಖಾತೆ ಬದಲಾವಣೆಯಿಂದ ಬೇಸತ್ತು ಮಾಧುಸ್ವಾಮಿ, ಆನಂದ್ ಸಿಂಗ್ ರಾಜೀನಾಮೆ ನೀಡುವ ವಿಚಾರಕ್ಕೆ ಪ್ರತಿಕ್ರಯಿಸಿದ ಸಚಿವ ರಮೇಶ ಜಾರಕಿಹೊಳಿ, ಈ ಬಗ್ಗೆ ನಮಗೆ ಯಾವುದೂ ಮಾಹಿತಿ ಇಲ್ಲ. ಅದೇ ರೀತಿ ಸಂಪುಟ ವಿಸ್ತರಣೆ ಮೊದಲೇ ಮುಖ್ಯಮಂತ್ರಿಗಳಿಗೆ ಒತ್ತಡ ಇದ್ದರೆ ಸಚಿವ ಸ್ಥಾನ ತ್ಯಾಗ ಮಾಡಲು ನಾನು ಸಿದ್ಧನಿದ್ದೇನೆ ಎಂದು ಆನಂದ ಸಿಂಗ್ ಹೇಳಿದ್ದರು. ಆದರೆ ಈಗ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next