Advertisement

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನನ್ನ ಸ್ಫರ್ಧೆ ಖಚಿತ: ಶಿವರಾಮೇ ಗೌಡ

11:23 PM Oct 07, 2022 | Team Udayavani |

ಮದ್ದೂರು: ನಾಗಮಂಗಲ ಕ್ಷೇತ್ರದ ಜನ ಬದಲಾವಣೆ ಬಯಸು ತ್ತಿದ್ದು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮತದಾ ರರು ಯಾರ ಕೈ ಹಿಡಿಯಲಿದ್ದಾರೆ ಎಂಬು ದನ್ನು ಕಾದು ನೋಡಬೇಕೆಂದು ಮಾಜಿ ಸಂಸದ ಎಲ್‌. ಆರ್‌. ಶಿವರಾಮೇ ಗೌಡ ತಿಳಿಸಿದರು.

Advertisement

ತಾಲೂಕಿನ ಕೊಪ್ಪ ಹೋಬಳಿ ಗುಡಿದೊಡ್ಡಿ ಗ್ರಾಮದಲ್ಲಿ ಬೀರೇಶ್ವರ, ಚನ್ನಕೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದರು.

ಕ್ಷೇತ್ರದ ಜನ ಈಗಾಗಲೇ ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಹಾಗೂ ಶಾಸಕ ಸುರೇಶ್‌ ಗೌಡ ಕಾರ್ಯಶೈಲಿಯನ್ನು ನೋಡಿದ್ದಾರೆ. ಮುಂದೆ ನನಗೂ ಒಂದು ಅವಕಾಶ ನೀಡಲಿದ್ದಾರೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಈಗಾಗಲೇ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಿಂದ ಆಹ್ವಾನವಿದ್ದು, ಮುಂದಿನ ದಿನಗಳಲ್ಲಿ ಹಿತೈಷಿಗಳು, ಬೆಂಬಲಿಗರ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next