Advertisement

ಕೋವಿಡ್‍ ವಿರುದ್ಧ ಹೋರಾಟಕ್ಕೆ ಮೊದಲ ಪ್ರಾಶಸ್ತ್ಯ : ಮಮತಾ ಬ್ಯಾನರ್ಜಿ

05:39 PM May 02, 2021 | Team Udayavani |

ಕೋಲ್ಕತ್ತಾ : ಕೋವಿಡ್ ಮಹಾಮಾರಿ ವಿರುದ್ಧ ಹೋರಾಟ ನನ್ನ ಮೊದಲ ಆದ್ಯತೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Advertisement

ಇಂದು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪ್ರಚಂಡ ಗೆಲುವು ಪಡೆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿರುವ ದೀದಿ, ವಿಜಯ ಕರುಣಿಸಿದ ಜನತೆಗೆ ಧನ್ಯವಾದ ಹೇಳಿದರು. ಮುಂದುವರೆದು ಮಾತನಾಡಿದ ಮಮತಾ, ನನ್ನ ಮೊದಲ ಆದ್ಯತೆ ಕೋವಿಡ್ ಸೋಂಕಿನ ವಿರುದ್ಧ ಹೋರಾಡುವುದಾಗಿದೆ. ಕೋವಿಡ್ ನಿಯಮಾವಳಿಗಳನ್ನು ತಪ್ಪದೆ ಪಾಲಿಸಿ ಎಂದು ತನ್ನ ಕಾರ್ಯಕರ್ತರಿಗೆ ಹೇಳಿದ್ದಾರೆ.

ಇನ್ನು ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಗೆ 1200 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಸುಮೇಂದುಅಧಿಕಾರಿ ಸೋಲು ಕಂಡಿದ್ದಾರೆ.

ಪಶ್ಚಿಮ ಬಂಗಾಳದ 292 ಕ್ಷೇತ್ರಗಳ ಪೈಕಿ ಸಂಜೆ ವೇಳೆಗೆ ಟಿಎಂಸಿ 218, ಬಿಜೆಪಿ 71 ಮತ್ತು ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಟಿಎಂಸಿಯ ಗೆಲುವು ಖಚಿತವಾಗಿದ್ದು, ಮತ್ತೊಂದು ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ರಾಜ್ಯಭಾರ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next