Advertisement

ಆಪರೇಷನ್ ಕಮಲ ಆಗುತ್ತಿದೆ! ಆದರೆ ನನ್ನ ಸರ್ಕಾರ ಸುಭದ್ರವಾಗಿದೆ- HDK

06:51 AM Jan 14, 2019 | Team Udayavani |

ಮೈಸೂರು: ಸಮ್ಮಿಶ್ರ ಸರಕಾರವನ್ನು ಕೆಡವಲು ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ನನ್ನ ಸರ್ಕಾರ ಸುಭದ್ರವಾಗಿದೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. 

Advertisement

ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿಯವರು ಶಾಸಕರಿಗೆ ಯಾವ ಯಾವ ಆಮಿಷ ಒಡ್ಡುತ್ತಿದ್ದಾರೆಂದು ನನಗೆ ಗೊತ್ತಿದೆ. ನಾನು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ  ಎಂದು ಆಪರೇಷನ್ ಕಮಲಕ್ಕೆ ತಿರುಗೇಟು ನೀಡಿದರು. 

ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಇತರರು ಮುಂಬೈಗೆ ಹೋಗಿರುವ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಮುಂಬೈ ಗೆ ಹೋಗಿರುವವರು ನನ್ನ ಸ್ನೇಹಿತರು, ಅವರು ನನ್ನ ಸಂಪರ್ಕದಲ್ಲಿ ಇದ್ದಾರೆ. ಅವರು ನನ್ನ ಗಮನಕ್ಕೆ ತಂದೇ ಮುಂಬೈ ಗೆ ಹೋಗಿರುವುದು. ಸರಕಾರದ ಅಭದ್ರತೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 

ನಮಗೆ ಆತಂಕ ಇಲ್ಲ- ಪರಮೇಶ್ವರ್ 
ಕಾಂಗ್ರೆಸ್ ನಾಯಕರನ್ನು ತಮ್ಮತ್ತ ಸೆಳೆಯಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಯಶಸ್ವಿಯಾಗುವುದಿಲ್ಲ. ಮುಂಬೈಗೆ ಹೋಗಿರುವ ನಾಯಕರು ಯಾಕೆ ಮುಂಬೈ ಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ. ಸರಕಾರ ಸ್ಥಿರವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್  ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next