Advertisement

ನನ್ನ ಜೀವಕ್ಕೆ ಅಪಾಯವಿದೆ; ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ನೂಪುರ್

08:35 PM Jun 20, 2022 | Team Udayavani |

ಕೋಲ್ಕತಾ: ಬಿಜೆಪಿಯಿಂದ ಅಮಾನತುಗೊಂಡಿರುವ, ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಸೋಮವಾರ,   ತನ್ನ ಜೀವಕ್ಕೆ ಅಪಾಯವಿದೆ ಎಂದು ಕೋಲ್ಕತ್ತಾ ಪೊಲೀಸರ ಎದುರು ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.

Advertisement

ಸುದ್ದಿ ಸಂಸ್ಥೆಯ ಮೂಲಗಳ ಪ್ರಕಾರ, ನೂಪುರ್ ಈ ಸಂಬಂಧ ಕೋಲ್ಕತಾ ಪೊಲೀಸರಿಗೆ ಇಮೇಲ್ ಕಳುಹಿಸಿದ್ದಾರೆ. ನಾಲ್ಕು ವಾರಗಳ ನಂತರ ನರಕೊಂಡ ಪೊಲೀಸ್ ಠಾಣೆಗೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ಆ ಇಮೇಲ್‌ನಲ್ಲಿ ತಿಳಿಸಿದ್ದಾರೆ. ಆದರೆ, ಅವರಿಗೆ ಮುಂದಿನ ದಿನಾಂಕದಂದು ಪೊಲೀಸರು ಮಾಹಿತಿ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದಿಲ್ಲ.

ನೂಪುರ್ ಅವರ ಪ್ರವಾದಿ ಕುರಿತಾಗಿ ವಿವಾದಾತ್ಮಕ ಹೇಳಿಕೆಗಳ ನಂತರ, ದೇಶದ ವಿವಿಧ ಭಾಗಗಳಲ್ಲಿ ಆಕ್ರೋಶದ ಬೆಂಕಿಎದ್ದಿತ್ತು. ಪಶ್ಚಿಮ ಬಂಗಾಳದ ಕೋಲ್ಕತಾ ಸೇರಿದಂತೆ ರಾಜ್ಯದ ಹಲವೆಡೆ ನೂಪುರ್ ಹೆಸರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದು ದೂರಿನ ಆಧಾರದ ಮೇಲೆ ಜೂನ್ 20 ರೊಳಗೆ ಖುದ್ದು ಹಾಜರಾಗುವಂತೆ ನರಕೊಂಡ ಪೊಲೀಸ್ ಠಾಣೆ ನೂಪುರ್‌ಗೆ ಸೂಚಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 41ಎ ಅಡಿಯಲ್ಲಿ ನೂಪುರ್‌ಗೆ ನೋಟಿಸ್ ಕಳುಹಿಸಲಾಗಿದೆ. ಅದನ್ನೇ ಮುಂದೂಡುವಂತೆ ನೂಪುರ್ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next