Advertisement

ಮುಂದಿನ ಚುನಾವಣೆಗೂ ನನ್ನದೇ ನಾಯಕತ್ವ: ಸಿಎಂ

07:05 AM Oct 02, 2017 | Team Udayavani |

ಚಿತ್ರದುರ್ಗ: ಮುಂದಿನ ವಿಧಾನಸಭಾ ಚುನಾವಣೆಯೂ ತಮ್ಮ ನಾಯಕತ್ವದಲ್ಲೇ ನಡೆಯಲಿದೆ ಎಂದು ಪುನರುಚ್ಚರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯದಲ್ಲಿ ಮಾಧ್ಯಮಗಳು ಗೊಂದಲ ಸೃಷ್ಟಿಸುತ್ತಿವೆ
ಎಂದು ಆಕ್ಷೇಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆ ಬಳಿಕ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು. ಆದರೆ ಚುನಾವಣೆ ಮಾತ್ರ ತಮ್ಮ ನಾಯಕತ್ವದಲ್ಲೇ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದರು. “ಮುಂದಿನ ವರ್ಷದ ಮೈಸೂರು ದಸರಾ ನಮ್ಮ ಸರ್ಕಾರದಿಂದಲೇ ನಡೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದನ್ನು ಸಾಧಿಸಿ ತೋರಿಸುತ್ತೇವೆ’ ಎಂದರು. ದೇಶದಲ್ಲಿ ಬೆಂಕಿ ಹಚ್ಚುವುದು ಆರೆಸ್ಸೆಸ್‌ಗೆ ಕರಗತವಾಗಿದೆ.

Advertisement

ನಾವು ಸಾಮರಸ್ಯ ಸೃಷ್ಟಿ ಮಾಡುತ್ತಿದ್ದೇವೆ ಎನ್ನುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌ ಅವರ ಬೆಂಕಿ ರಾಮಯ್ಯ ಎಂಬ ಹೇಳಿಕೆಗೆ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next