Advertisement

ಕಾಂಗ್ರೆಸ್‌ ರಕ್ಷಣೆಗೆ ನನ್ನ ಬಂಡಾಯ ಸ್ಪರ್ಧೆ ಖಚಿತ: ರಾಜಣ್ಣ

02:02 AM Mar 14, 2019 | Team Udayavani |

ತುಮಕೂರು: “ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ಕಾಂಗ್ರೆಸ್‌ ಕಾರ್ಯಕರ್ತರ ರಕ್ಷಣೆಗಾಗಿ ಬಂಡಾಯ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತೇನೆ’ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ತುಮಕೂರು ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು. ಇಲ್ಲಿ ಕಾಂಗ್ರೆಸ್‌ ಸಂಸದರಿದ್ದಾರೆ. ಒಂದು ಪಕ್ಷ ಈ ಕ್ಷೇತ್ರವನ್ನು ಜೆಡಿಎಸ್‌ ಗೆ ಬಿಟ್ಟುಕೊಟ್ಟರೆ ನಾನೇ ಪಕ್ಷೇತರ ಅಭ್ಯರ್ಥಿಯಾಗಿ ನಿಂತುಕೊಳ್ಳುತ್ತೇನೆ’ ಎಂದು ಹೇಳಿದರು.
ಅಷ್ಟೇ ಅಲ್ಲ, ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಜಿಲ್ಲೆಯನ್ನು ಹಾಳು ಮಾಡಿ, ಇಲ್ಲಿಗೆ ಬಂದು ಚುನಾವಣೆಗೆ
ನಿಂತುಕೊಳ್ಳುತ್ತೇನೆ ಎಂದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next