Advertisement

ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಯಿತು: ಖರ್ಗೆ

09:41 AM Dec 13, 2019 | Sriram |

ಬೆಂಗಳೂರು:ಉಪ ಚುನಾವಣೆಯ ನಂತರ ಸಿಹಿ ಸುದ್ದಿ ನೀಡುತ್ತೇನೆ ಎಂದು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಯಿತು. ಜೆಡಿಎಸ್‌ ಜೊತೆಗೆ ಮೈತ್ರಿ ಎಂಬ ಅರ್ಥದಲ್ಲಿ ಬಿಂಬಿಸಲಾಯಿತು ಎಂದು ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಂತರ ಸಿಹಿ ಸುದ್ದಿ ಎಂದರೆ ಪಕ್ಷ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಹೇಳಿದ್ದೆ. ಆದರೆ, ಅದನ್ನು ಕೆಲವು ನಾಯಕರು ತಪ್ಪಾಗಿ ಅರ್ಥೈಸಿಕೊಂಡು, ನಮ್ಮಲ್ಲಿಯೇ ಒಡಕು ಸೃಷ್ಟಿಸಲಾಯಿತು. ಮೈತ್ರಿ ವಿಷಯ ಪ್ರಸ್ತಾಪಿಸಿರುವುದೇ ಹಿನ್ನಡೆಗೆ ಕಾರಣವಾಯಿತು ಎನ್ನುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ರಾಜೀನಾಮೆ ಸಲ್ಲಿಕೆಯ ಬಗ್ಗೆಯೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಇನ್ನು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ತಿದ್ದುಪಡಿ ಅಂಗೀಕಾರವಾಗಿರುವುದರಿಂದ ಈಗ ಆ ಬಗ್ಗೆ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next