Advertisement

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿ ಕೇಜ್ರಿವಾಲ್‌ ಟ್ವೀಟ್‌

06:25 PM Oct 29, 2022 | Team Udayavani |

ಬೆಂಗಳೂರು: ಪುನೀತ್‌ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಪುನೀತ್‌ ಅವರನ್ನು ಸ್ಮರಿಸಿಕೊಂಡಿದ್ದಾರೆ. ದೆಹಲಿ ಸಿ.ಎಂ ಅರವಿಂದ್‌ ಕೇಜ್ರಿವಾಲ್‌, ಕೂಡ ಅಪ್ಪುವನ್ನು ನೆನಪು ಮಾಡಿಕೊಂಡಿದ್ದು,  ಟ್ವೀಟ್‌ ಮಾಡಿ ಗಮನಸೆಳೆದರು.

Advertisement

ಇದನ್ನೂ ಓದಿ:ಪುನೀತ್‌ ಪ್ರಥಮ ಪುಣ್ಯಸ್ಮರಣೆ: ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಭಾವುಕ ಪತ್ರ

“ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನಗಳು’ ಎಂದು ಬರೆದುಕೊಂಡಿರುವ ಕೇಜ್ರಿವಾಲ್‌, “ಡಾ. ಪುನೀತ್‌ ರಾಜಕುಮಾರ್‌ ಅವರ ಪುಣ್ಯತಿಥಿಯಾಗಿರುವ ಇಂದು ಅವರನ್ನು ನಾನು ನೆನಪಿಸಿಕೊಳ್ಳುತ್ತೇನೆ.


ಅವರು ನಟಿಸಿರುವ ಸಿನಿಮಾ, ಹಾಡುಗಳು ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಬಿಟ್ಟು ಹೋಗಿಲ್ಲ ಎಂದು ಅನಿಸುತ್ತದೆ. ಅವರು ಯಾವತ್ತೂ ಪವರ್‌ ಸ್ಟಾರ್‌ ಆಗಿಯೇ ಇರುತ್ತಾರೆ’ ಎಂದು ಪುನೀತ್‌ ಗುಣಗಾನ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next