Advertisement

ಮ್ಯಾನ್ಮಾರ್‌ ಹಿಂಸೆ: ಸೂಕಿ ಮೇಲೆ ಒತ್ತಡ

09:50 AM Sep 06, 2017 | Team Udayavani |

ಶಮ್ಲಾಪುರ್‌: ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಹೆದರಿ ಕಳೆದ 10 ದಿನಗಳಲ್ಲಿ 1.25 ಲಕ್ಷ ಮಂದಿ ಅಲ್ಲಿಂದ ವಲಸೆ ಹೋಗಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ವಿಶ್ವಸಂಸ್ಥೆ ಬಹಿರಂಗಪಡಿಸಿದೆ. 

Advertisement

ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್‌ನ ನಾಯಕಿ ಆಂಗ್‌ ಸಾನ್‌ ಸೂಕಿ ಅವರ ಮೇಲೆ ಒತ್ತಡ ಹೆಚ್ಚುತ್ತಿದ್ದು, ಹಿಂಸಾಚಾರವನ್ನು ನಿಯಂತ್ರಿಸು ವಂತೆ ಬಾಂಗ್ಲಾದೇಶ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳು ಆಗ್ರಹಿಸಿವೆ. “ಮ್ಯಾನ್ಮಾರ್‌ನ ಭದ್ರತಾ ಅಧಿಕಾರಿಗಳು ಅಲ್ಲಿನ ಹಿಂಸಾಚಾರವನ್ನು ತಡೆಗಟ್ಟಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಜತೆಗೆ, ಸಂತ್ರಸ್ತರಿಗೆ ಮಾನವೀಯ ನೆರವು ಒದಗಿಸಬೇಕು’ ಎಂದು ಒತ್ತಾಯಿಸಿವೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ಮ್ಯಾನ್ಮಾರ್‌ಗೆ ತೆರಳಿದ್ದು, ರೋಹಿಂಗ್ಯಾ ವಲಸಿಗರ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next