Advertisement

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

12:11 PM Sep 29, 2023 | Team Udayavani |

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ. ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು.

Advertisement

ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು.

ಮಾವುತರು ಹಾಗೂ ಕವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.

ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

Advertisement

ಈ ಸಂದರ್ಭದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ, ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತ ಬಿ ರಮೇಶ್, ಅರಣ್ಯಾಧಿಕಾರಿ ಸೌರಭ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next