Advertisement

Mysore: ರಾಮಕೃಷ್ಣ ಆಶ್ರಮದಲ್ಲಿ ಬೋನಿಗೆ ಬಿದ್ದ ಗಂಡು ಚಿರತೆ

12:39 PM Dec 19, 2023 | Team Udayavani |

ಮೈಸೂರು: ಕಳೆದೊಂದು ವಾರದಿಂದ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಭೀತಿ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಚಿರತೆ ಬಂಧಿಯಾದ ಕಾರಣ ರಾಮಕೃಷ್ಣ ಆಶ್ರಮದ ಮಕ್ಕಳು ನಿಟ್ಟುಸಿರು ಬಿಟ್ಟಿದ್ದಾರೆ.

Advertisement

ಮೈಸೂರಿನ ರಾಮಕೃಷ್ಣ ಆಶ್ರಮದ ಕ್ಯಾಂಪಸ್ ನಲ್ಲಿ ಕಳೆದ ಏಳು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಆರು ದಿನಗಳ ಹಿಂದೆ ಅರಣ್ಯ ಇಲಾಖೆ ಬೋನು ಇರಿಸಿತ್ತು.

ಮಂಗಳವಾರ ಮುಂಜಾನೆ ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ವಲಯ ಅಧಿಕಾರಿ ಆರ್‌ಎಫ್ಒ ಸುರೇಂದ್ರ.ಕೆ ಮತ್ತು ಸಿಬ್ಬಂದಿಗಳು ಸೆರೆ ಸಿಕ್ಕ ಚಿರತೆಯನ್ನು ಅರಣ್ಯಕ್ಕೆ ಬಿಡಲು ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next