Advertisement

ಹುಟ್ಟುಹಬ್ಬದ ಪಾರ್ಟಿಯಲ್ಲಿದ್ದ ಬಿಜೆಪಿ ಮುಖಂಡನ ಭೀಕರ ಕೊಲೆ

09:44 AM Mar 07, 2020 | keerthan |

ಮೈಸೂರು: ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದ ಬಿಜೆಪಿ ಮುಖಂಡ ಅಪಾರ್ಟ್ ಮೆಂಟ್ ಒಂದರಲ್ಲಿ ಸ್ನೇಹಿತರಿಂದಲೇ ಹತ್ಯೆಯಾದ ಘಟನೆ ಗುರುವಾರ ತಡರಾತ್ರಿ ಮೈಸೂರಿನ  ಕುವೆಂಪುನಗರದಲ್ಲಿ ನಡೆದಿದೆ.

Advertisement

ಬಿಜೆಪಿ ಮುಖಂಡ ಹೆಚ್.ವಿ.ರಾಜೀವ್ ಬೆಂಬಲಿಗನಾಗಿದ್ದ ಆನಂದ್ ಅಲಿಯಾಸ್ ವಡ್ಡ ಆನಂದ್  ಕೊಲೆಯಾದ ವ್ಯಕ್ತಿ.

ಕಳೆದ 13 ವರ್ಷಗಳ ಹಿಂದೆ ಜನತಾ ನಗರದ ಸ್ಮಶಾನ ರಸ್ತೆಯಲ್ಲಿ ನಡೆದ ಕೊಲೆ ಪ್ರಕರಣ ಕೊಲೆ ಕೇಸ್ ನಲ್ಲಿ ಆನಂದ್ ಆರೋಪಿಯಾಗಿದ್ದ. ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ.‌ ಹಳೇ ವೈಷಮ್ಯದ ಕಾರಣ ಕೊಲೆ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ.

ಆನಂದ್ ನಿನ್ನೆ ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ. ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಂ ಮಾಡಿ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿ ನಡೆಯುವಾಗಲೇ ಸ್ನೇಹಿತರೊಂದಿಗೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಸ್ನೇಹಿತರು ಬಿಯರ್ ಬಾಟಲಿಯಿಂದ ಹೊಟ್ಟೆಗೆ ಚುಚ್ಚಿದ್ದಾರೆ. ಮನಸೋ ಇಚ್ಛೆ ಬಾಟಲಿಯಿಂದ ಇರಿದು ಹತ್ಯೆ ಮಾಡಿದ್ದಾರೆ. ಓರ್ವ ಆರೋಪಿಯನ್ನು   ಪೊಲೀಸರು ಬಂಧಿಸಿದ್ದು, ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next