Advertisement

Mysore: ಮಾರಕಾಸ್ತ್ರಗಳಿಂದ ಕೊಚ್ಚಿ ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರನ ಬರ್ಬರ ಹತ್ಯೆ

07:12 PM Mar 09, 2024 | sudhir |

ಮೈಸೂರು: ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ಹತ್ಯೆಯಾದ ವ್ಯಕ್ತಿಯನ್ನು ಪಾಲಿಕೆ ಮಾಜಿ ಸದಸ್ಯ ಪಂಡು ಸಹೋದರ ಅಕ್ಮಲ್ ಎಂದು ಗುರುತಿಸಲಾಗಿದೆ.

ಶುಕ್ರವಾರ ತಡರಾತ್ರಿ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತ ಸಮೀಪ ಐದಕ್ಕೂ ಹೆಚ್ಚು ಮಂದಿಯ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ.

ಅಕ್ಮಲ್ ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಬೆಂಗಳೂರು ಮೂಲದ ವ್ಯಕ್ತಿಗಳಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: Bantwala: ಕಂಟೇನರ್ ಲಾರಿ-ಬಸ್‌ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ ಗಾಯ

Advertisement

Udayavani is now on Telegram. Click here to join our channel and stay updated with the latest news.

Next