Advertisement

Mysore Dasara: ಪಂಡಿತ್ ರಾಜೀವ್ ತಾರಾನಾಥ್ ಬಳಿ ಕಮಿಷನ್ ಕೇಳಿದ್ರಾ ಅಧಿಕಾರಿಗಳು ?

10:06 AM Oct 14, 2023 | Team Udayavani |

ಮೈಸೂರು: ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.

Advertisement

91 ವರ್ಷ ವಯಸ್ಸಿನ ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರೇ ಈ ಆರೋಪ ಮಾಡಿದ್ದಾರೆ.

ದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮೀಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮೀಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.

ಈ ಘಟನೆ ನಂತರ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಿಲ್ಲ.

ಇದನ್ನೂ ಓದಿ: Rakshit Shetty: ”777 ಚಾರ್ಲಿ 2” ಯಾಕೆ ಮಾಡಲಿಲ್ಲ… ಕಾರಣ ಬಿಚ್ಚಿಟ್ಟ ಸಿಂಪಲ್ ಸ್ಟಾರ್

Advertisement

 

Advertisement

Udayavani is now on Telegram. Click here to join our channel and stay updated with the latest news.

Next