Advertisement

ಮoಡ್ಯ: ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ

07:20 PM Nov 29, 2020 | Mithun PG |

ಮoಡ್ಯ: ಮಳವಳ್ಳಿ ಪಟ್ಟಣದ ರಾವಣಿ ರಸ್ತೆ ಬಳಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪಟ್ಟಣದ ಪುರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.

Advertisement

ಹೊಸಕೋಟೆ ತಾಲ್ಲೂಕಿನ ನಂದಗುಡಿ ಗ್ರಾಮದ ಇರ್ಫಾನ್(28), ಸೈಯದ್ ಶಬೀರ್(26), ಪೈರೋಜ್(27), ಶಾಮೀರ್ ಅಹಮದ್(27) ಬಂಧಿತ ಆರೋಪಿಗಳು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಪುರ ಠಾಣೆಯ ಪಿಐ ಎ.ಕೆ. ರಾಜೇಶ್ ಹಾಗೂ ಸಿಬ್ಬಂದಿಗಳಾದ ಮಾದೇಶ, ಶಿವಕುಮಾರ್ ಗಸ್ತು ತಿರುಗುವ ವೇಳೆ ರಾವಣಿ ರಸ್ತೆಯ ಕ್ರಾಸ್ ಬಳಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರಗಳೊಂದಿಗೆ ನಿಂತಿದ್ದ ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಗಳ ಬೆನ್ನಟ್ಟಿ ಬಂಧಿಸಿದ್ದಾರೆ. ನಂತರ ವಿಚಾರಿಸಿದಾಗ ದರೋಡೆ ಮಾಡುವ ಸಂಚು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಭಾರತೀಯ ಯುವಕನಿಂದ ಲವ್ ಪ್ರಪೋಸ್; ಒಪ್ಪಿಗೆ ನೀಡಿದಳಾ ಆಸೀಸ್ ಯುವತಿ ? ವಿಡಿಯೋ ವೈರಲ್

ಬoಧಿತರಿoದ ಒಂದು ಕಾರು, ಒಂದು ಲಾಂಗ್, ಚಾಕು, ಖಾರದಪುಡಿ, 4 ಮಂಕಿ ಕ್ಯಾಪ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ:  ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಹೋಗಿದೆ;ದೇಶದ್ರೋಹಿಗಳನ್ನು ಮಟ್ಟ ಹಾಕುವುದು ಖಂಡಿತಾ: CT ರವಿ

 

Advertisement

Udayavani is now on Telegram. Click here to join our channel and stay updated with the latest news.

Next