Advertisement

ಮೈಸೂರು ದಸರಾ: ಇಂದು ಸಿಎಂ ನೇತೃತ್ವದಲ್ಲಿ ಸಭೆ

07:56 PM Jul 30, 2023 | Team Udayavani |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಮೈಸೂರಿಗೆ ಕರೆತರಲು ಸಿದ್ಧತೆ ನಡೆದಿದೆ. ಆಗಸ್ಟ್‌ 21ರಂದು ಗಜಪಯಣ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸೋಮವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ದಸರಾ ಉನ್ನತ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ.

Advertisement

ದಸರಾ ಉತ್ಸವಕ್ಕೆ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ 14 ಆನೆಗಳನ್ನು ಕರೆತರಲು ನಿರ್ಧರಿಸಿರುವ ಅರಣ್ಯ ಇಲಾಖೆಯು ಮತ್ತಿಗೋಡು, ದುಬಾರೆ, ರಾಂಪುರ ಹಾಗೂ ಬಳ್ಳೆ ಸಾಕಾನೆ ಶಿಬಿರಗಳಿಗೆ ತೆರಳಿ ಒಂದು ಸುತ್ತಿನ ಆಯ್ಕೆ ಪ್ರಕ್ರಿಯೆ ನಡೆಸಿದೆ. ಜತೆಗೆ ಗಜಪಯಣದ ಮೂಲಕ ಮೈಸೂರಿಗೆ ಕರೆತರುವ ಮೊದಲ ತಂಡದ ಆನೆಗಳ ಪಟ್ಟಿ ಸಿದ್ಧಪಡಿಸಿದೆ.

ಈ ಬಾರಿಯ ದಸರಾ ಮಹೋತ್ಸವ ಅ.15ರಿಂದ ಆರಂಭವಾಗಲಿದ್ದು, 24ರಂದು ಜಂಬೂಸವಾರಿ ನೆರವೇರಲಿದೆ.

21ಕ್ಕೆ ಗಜಪಯಣ?:

ಅ.24ರಂದು ದಸರಾ ಜಂಬೂ ಸವಾರಿ ನಡೆಯಲಿದ್ದು, ಅದಕ್ಕಾಗಿ ಗಜಪಡೆಯನ್ನು ತಯಾರಿ ಮಡುವ ಸಲುವಾಗಿ ಎರಡು ತಿಂಗಳ ಮುಂಚಿತವೇ ಮೈಸೂರಿಗೆ ಕರೆತರುವುದು ವಾಡಿಕೆ. ಅದರಂತೆ ಈ ಬಾರಿಯೂ ಆಗಸ್ಟ್‌ ಕೊನೆ ವಾರ ಅಂದರೆ 21ರಂದು ನಾಗರಹೊಳೆ ಉದ್ಯಾನದಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಗಜಪಯಣ ನಡೆಸುವ ಮೂಲಕ 6ರಿಂದ 8 ಆನೆಗಳ ಮೊದಲ ತಂಡವನ್ನು ಕರೆತರಲು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.

Advertisement

ಅಂದು ವೀರನಹೊಸಹಳ್ಳಿಯಿಂದ ಬರುವ ಗಜಪಡೆಯ ಮೊದಲ ತಂಡ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ 3 ದಿನಗಳ ಕಾಲ ತಂಗಲಿವೆ. ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಸೌರಭ್‌ ಕುಮಾರ್‌ ನೇತೃತ್ವದಲ್ಲಿ ಆರ್‌ಎಫ್ಒ ಸಂತೋಷ್‌ಹೂಗಾರ್‌, ಪಶುವೈದ್ಯರಾದ ಡಾ. ರಮೇಶ್‌ ಮತ್ತು ಡಾ.ಮುಜೀಬ್‌ ತಂಡ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಗೆ ಒಳಪಡುವ ಬಳ್ಳೆ, ಮತ್ತಿಗೋಡು, ದುಬಾರೆ ಆನೆ ಕ್ಯಾಂಪ್‌ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿರುವ ರಾಂಪುರ ಆನೆ ಶಿಬಿರಕ್ಕೆ ತೆರಳಿ ಅಂಬಾರಿ ಆನೆ ಅಭಿಮನ್ಯ ಸೇರಿ ದಸರಾ ಮಹೋತ್ಸವದಲ್ಲಿ ಕರೆತರಲು ಉದ್ದೇಶಿಸಿರುವ ಆನೆಗಳ ಸರ್ವಿಸ್‌ ಕಾರ್ಡ್‌ ಪರಿಶೀಲನೆ ನಡೆಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವ ಅ.15ರಿಂದ ಆರಂಭವಾಗಲಿದ್ದು, 24ರಂದು ಜಂಬೂಸವಾರಿ ನೆರವೇರಲಿದೆ.

8 ಆನೆಗಳು ಬರುವ ಸಾಧ್ಯತೆ:

ಈ ಬಾರಿಯ ಗಜಪಯಣದ ಮೂಲಕ ಮೊದಲ ತಂಡದಲ್ಲಿ 8 ಆನೆಗಳು ಬರುವ ಸಾಧ್ಯತೆಗಳಿದ್ದು, ಮತ್ತಿಗೋಡು ಶಿಬಿರದಿಂದ ಅಂಬಾರಿ ಆನೆ ಅಭಿಮನ್ಯು, ಭೀಮ, ಮಹೇಂದ್ರ, ಲಕ್ಷ್ಮೀ ಮತ್ತು ವರಲಕ್ಷ್ಮೀ. ಹಾಗೆಯೇ ಬಳ್ಳೆಯಿಂದ ಮಾಜಿ ಕ್ಯಾಪ್ಟನ್‌ ಅರ್ಜುನ, ದುಬಾರೆಯಿಂದ ಧನಂಜಯ ಮತ್ತು ಗೋಪಿ ಆನೆ ಕರೆತರಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next