Advertisement

ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

01:22 PM Mar 28, 2022 | Team Udayavani |

ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದಿದೆ.

Advertisement

ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಸಿಬಂದಿ   ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷೆ: ಹೈಕೋರ್ಟ್ ಆದೇಶ ಪಾಲಿಸಿದ ವಿದ್ಯಾರ್ಥಿಗಳು

ವಿದ್ಯಾರ್ಥಿನಿಯ ಮೃತದೇಹವನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿ ಇರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next