Advertisement

ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ

12:27 AM Jun 06, 2021 | Team Udayavani |

ಬೆಂಗಳೂರು : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಬಿ. ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಸೇರಿ ಒಟ್ಟು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Advertisement

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಮತ್ತು ಧಾರ್ಮಿಕ-ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದರೆ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರನ್ನು ಗ್ರಾಮೀಣಾಭಿವೃದ್ದಿ ಇಲಾಖೆಯ ಇ ಆಡಳಿತದ ನಿರ್ದೇಶಕಿಯಾಗಿ ವರ್ಗ ಮಾಡಲಾಗಿದೆ. ಡಾ| ಬಗಾದಿ ಗೌತಮ್‌ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಹೊಣೆ ಮತ್ತು ಲಕ್ಷ್ಮೀಕಾಂತ್‌ ರೆಡ್ಡಿ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಈಗಾಗಲೇ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತೆ ನಡುವಿನ ಕಿತ್ತಾಟ ಬೀದಿಗೆ ಬಂದಿದ್ದು ಪರಸ್ಪರ ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುವ ಮೂಲಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು, ಈ ನಡುವೆ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜಿನಾಮೆಯನ್ನು ನೀಡಲು ಮುಂದಾಗಿದ್ದು ಕೂಡಾ ಗೊತ್ತಿರುವ ವಿಚಾರ, ಈ ನಡುವೆ ಸರಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ :ವೈಯಕ್ತಿಕ ದ್ವೇಷ: ವಾಹನ ಹರಿಸಿ ಓರ್ವನ ಕೊಲೆ ? ಕುಂದಾಪುರದ ಯಡಮೊಗೆ ಯಲ್ಲಿ ನಡೆದ ಘಟನೆ

 

Advertisement
Advertisement

Udayavani is now on Telegram. Click here to join our channel and stay updated with the latest news.

Next