Advertisement

Mysore: ಸಿಎಂ ಮನೆ ಮೇಲೆ ಕಲ್ಲೆಸೆದ ವ್ಯಕ್ತಿ; ಪೊಲೀಸ್ ವಶಕ್ಕೆ

05:27 PM Oct 10, 2023 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ವ್ಯಕ್ತಿಯೊಬ್ಬ ಕಲ್ಲೆಸೆದ ಘಟನೆ ಮಂಗಳವಾರ ನಡೆದಿದೆ. ಬೆಳಗ್ಗೆ 8 ಗಂಟೆ ಸುಮಾರು ಘಟನೆ ನಡೆದಿದೆ.

Advertisement

ಟಿ.ಕೆ ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸಕ್ಕೆ ಮೈಸೂರಿನ ಸತ್ಯಮೂರ್ತಿ ಎಂಬಾತ ಕಲ್ಲೆಸೆದಿದ್ದ. ಈತನನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇದೇ ಸತ್ಯಮೂರ್ತಿ ಎವಿಎಂ ಯಂತ್ರ ಒಡೆದು ಹಾಕಿದ್ದ. ಅಲ್ಲದೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂಂದ್ರ ಅವರ ಫೋಟೊಗೆ ರೌಡಿ ರಾಜೇಂದ್ರ ಎಂದು ಪೋಸ್ಟ್ ಮಾಡಿದ್ದ. ಈತ ಮಾನಸಿಕ ಅಸ್ವಸ್ಥ ಎಂದು ಈ ಹಿಂದೆ ಹೇಳಲಾಗಿತ್ತು.

ಘಟನೆ ಸಂಬಂಧ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next