Advertisement

ಮೈಸೂರು; ಶಾಸಕ ಎಸ್ ಎ ರಾಮದಾಸ್ ಗೆ ಹೃದಯಾಘಾತ, ಐಸಿಯುನಲ್ಲಿ ತುರ್ತು ಚಿಕಿತ್ಸೆ

09:45 AM Feb 12, 2020 | Nagendra Trasi |

ಮೈಸೂರು: ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಗೆ ಲಘು ಹೃದಯಾಘಾತ ಸಂಭವಿಸಿದ್ದು, ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement

ಒಂಟಿಕೊಪ್ಪಲಿನ ಮನೆಯಲ್ಲಿದ್ದ ವೇಳೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ಖಾಸಗಿ ಆಸ್ಪತ್ರೆಯಲ್ಲಿ ರಾಮದಾಸ್ ಅವರಿಗೆ ನುರಿತ ವೈದ್ಯರು ಆ್ಯಂಜಿಯೊ ಪ್ಲಾಸ್ಟ್ ಮಾಡುತ್ತಿರುವುದಾಗಿ ವರದಿ ತಿಳಿಸಿದೆ. ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next