Advertisement

ಮೈಸೂರು: ನೂತನ ಮೇಯರ್ ಸುನಂದಾಗೆ ನಳಿನ್‍ಕುಮಾರ್ ಕಟೀಲ್ ಅಭಿನಂದನೆ

03:13 PM Aug 25, 2021 | Team Udayavani |

ಬೆಂಗಳೂರು: ಮೈಸೂರಿನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಬಿಜೆಪಿಯ ಸದಸ್ಯೆ ಸುನಂದಾ ಪಾಲನೇತ್ರಾ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಇದು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಂತ್ರಗಾರಿಕೆಗೆ ಸಿಕ್ಕ ಫಲ ಎಂದು ಅವರು ಶ್ಲಾಘಿಸಿದ್ದಾರೆ.

Advertisement

ಸಚಿವ ಸೋಮಶೇಖರ್ ಅವರು ಈ ಮೂಲಕ ಹಲವು ಮೊದಲುಗಳಿಗೆ ನಾಂದಿ ಹಾಡಿದ್ದಾರೆ. 38 ವರ್ಷಗಳ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯವರು ಮೇಯರ್ ಆಗಿರುವುದು ಸಂತಸ ತಂದಿದೆ. ಮೈಸೂರಿನಲ್ಲಿ ಬಿಜೆಪಿ ಪಾಲಿಗೆ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಲ್ಲದೆ, ಪಕ್ಷಕ್ಕಾಗಿ ಸೇವೆ ಹೀಗೆಯೇ ಮುಂದುವರಿಯಲಿ ಎಂದು ತಿಳಿಸಿದ್ದಾರೆ.

ನೂತನ ಮೇಯರ್ ಸುನಂದಾ ಪಾಲನೇತ್ರಾ ಅವರ ನೇತೃತ್ವದಲ್ಲಿ ಉತ್ತಮ ಆಡಳಿತವನ್ನು ನೀಡುವ ವಿಶ್ವಾಸವನ್ನು ಕಟೀಲ್ ಅವರು ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next