Advertisement

ಕೊರೊನಾ ಭೀತಿ: ಮಾರ್ಚ್ 22ರವರೆಗೆ ಮೈಸೂರು ಪ್ಯಾಲೆಸ್ ಬಂದ್

10:04 AM Mar 16, 2020 | keerthan |

ಮೈಸೂರು:  ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಕಾರಣ ಯಾವುದೇ ಸಭೆ ಸಮಾರಂಭ ಮಾಡದಂತೆ, ಶಾಲೆಗಳು ಚಿತ್ರ ಮಂದಿರಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಆದೇಶಿಸಿದೆ. ಇದರಂತೆ ಪ್ರಸಿದ್ದ ಮೈಸೂರು ಅರಮನೆಯನ್ನು ಮಾರ್ಚ್ 22ರವರೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

Advertisement

ಮೈಸೂರು ಅರಮನೆ ಸಮಿತಿ ಶನಿವಾರ ಈ ಮಾಹಿತಿ ನೀಡಿದ್ದು, ಮಾರ್ಚ್ 15ರಿಂದ 22ರವರೆಗೆ ಒಂದು ವಾರದ ಮಟ್ಟಿಗೆ ಪ್ರವಾಸಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕರ್ನಾಟಕದಲ್ಲಿ ಒಂದು ವಾರದ ಮಟ್ಟಿಗೆ ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಜಾತ್ರೆಗಳು, ಜಿಮ್ ಗಳು, ಸ್ವಿಮ್ಮಿಂಗ್ ಪೂಲ್ ಗಳು, ಸಭೆ ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು.

ರಾಜ್ಯದಲ್ಲಿ ಇದುವರೆಗೆ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ತಾಗಿದ್ದು, ಕಲಬುರಿಯ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 93 ಜನ ಕೊರೊನಾ ಸೋಂಕು ಪೀಡಿತರಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next