Advertisement

ಮೈಸೂರು: ಅರಣ್ಯಾಧಿಕಾರಿಗಳ ಗುಂಡಿಗೆ ಶ್ರೀಗಂಧ ಕಳ್ಳ ಬಲಿ 

10:59 AM Feb 11, 2017 | Team Udayavani |

ಮೈಸೂರು: ಇಲ್ಲಿನ ರಾಮಕೃಷ್ಣನಗರದ ಲಿಂಗಾಂಬುದಿ ಕೆರೆ ಆವರಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಶ್ರೀಗಂಧ ಕಳ್ಳನೊಬ್ಬ ಬಲಿಯಾದ ಬಗ್ಗೆ ವರದಿಯಾಗಿದೆ. 

Advertisement

ಶನಿವಾರ ನಸುಕಿನ 2 ಗಂಟೆಯ ವೇಳೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿದ್ದು , ಹತನೊಂದಿಗೆ ಇದ್ದ ಇನ್ನೂ ನಾಲ್ಕರಿಂದ ಐವರು ಮರಗಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. 

ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು , ಪೊಲೀಸ್‌ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆ ಆವರಣಕ್ಕೆ  ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next