Advertisement

ಮೈಸೂರು: ಕಬಿನಿ ರೆಸಾರ್ಟ್‌ ನಲ್ಲಿ ಸೋನಿಯಾ ವಾಸ್ತವ್ಯ

06:20 PM Oct 04, 2022 | Team Udayavani |

ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದ್ದು, ಯಾತ್ರೆಯಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷರೇ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಚೈತನ್ಯ ಮೂಡಿಸಿದೆ.

Advertisement

ಸೋನಿಯಾ ಗಾಂಧಿ ಅವರು ಅ.6ರಂದು ಬೆಳಗ್ಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅ.5ರಂದು ರಾತ್ರಿ ಮೈಸೂರಿಗೆ ಆಗಮಿಸಿ 6ರಂದು ಪಾಂಡವಪು ರದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರೇ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರಿದೆ.

ಸೋನಿಯಾ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಸೋಮವಾರ ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಮುಖಂಡರು ಸೋನಿಯಾಗಾಂಧಿ ಅವರನ್ನು ಬರಮಾಡಿಕೊಂಡರು. ನಂತರ ಸೋನಿಯಾ ಗಾಂಧಿ ಅವರು ಇಲ್ಲಿನ ಖಾಸಗಿ ಹೋಟೆಲ್‌ ವೊಂದಕ್ಕೆ ತೆರಳಿದರು.

ಸೋನಿಯಾ ಗಾಂಧಿ ಅವರು ಕೊಡಗಿನ ರೆಸಾರ್ಟ್‌ ವೊಂದರಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ವಾಸ್ತವ್ಯ ಹೂಡುವ ವ್ಯವಸ್ಥೆಯಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟ ರ್‌ ನಲ್ಲಿ ಕೊಡಗಿಗೆ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ, ಎಚ್‌.ಡಿ. ಕೋಟೆ ತಾಲೂಕು ಕಬಿನಿ ರೆಸಾರ್ಟ್‌ ವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next