Advertisement

ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದ ಸಾಂಸ್ಕೃತಿಕ ನಗರಿ ಮೈಸೂರು

01:56 PM Aug 20, 2020 | keerthan |

ಮೈಸೂರು: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ 2020 ಪ್ರಶಸ್ತಿ ಪ್ರಕಟ ಗೊಂಡಿದ್ದು, ಸಾಂಸ್ಕೃತಿಕ ನಗರಿ ಮೈಸೂರು 3 ರಿಂದ 10 ಲಕ್ಷ ಜನಸಂಖ್ಯೆಯುಳ್ಳ ನಗರದಗಳ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

Advertisement

ಜೊತೆಗೆ ಸಮಗ್ರ ವಿಭಾಗದಲ್ಲಿ ಮೈಸೂರು 5ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಸ್ವಚ್ಛ ನಗರಿ ಎಂಬ ಗರಿಮೆಗೆ ಪಾತ್ರವಾಗಿದೆ.

ನಗರದ ಅರಮನೆ ಆವರಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ವರ್ಚ್ಯುಯಲ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅನುಪಸ್ಥಿತಿಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಪೌರ ಕಾರ್ಮಿಕರ ಜೊತೆ ಸಂವಾದ ನಡೆಸಿದರು.

ಮೈಸೂರು ಪೌರ ಕಾರ್ಮಿಕರಾದ ಮಂಜುಳ ಹಾಗೂ ನಂಜುಂಡಸ್ವಾಮಿ ಸಂವಾದದಲ್ಲಿ ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next