Advertisement

ಕೋವಿಡ್ ಹಾವಳಿ : ಈ ಬಾರಿಯೂ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧಾರ

12:29 AM Sep 04, 2021 | Team Udayavani |

ಬೆಂಗಳೂರು : ಕೊರೊನಾ ಸೋಂಕು ಈ ಬಾರಿಯೂ ನಾಡಹಬ್ಬದ ಅದ್ದೂರಿ ಆಚರಣೆಗೆ ಅಂಕುಶ ಹಾಕಿದ್ದು, ಸರಳ- ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.

Advertisement

ಶುಕ್ರವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಮತ್ತು ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ, 10 ದಿನಗಳ ದೀಪಾಲಂಕಾರ ಏರ್ಪಡಿಸಲಾಗುವುದು ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಉತ್ಸವ ಉದ್ಘಾಟಕರ ಆಯ್ಕೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next