Advertisement

Mysuru: ಪಟಾಕಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ

04:33 PM Apr 19, 2023 | Team Udayavani |

ಮೈಸೂರು : ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದ ಬೊಮ್ಮನಹಳ್ಳಿ ಕೆರೆ ಬದಿಯಲ್ಲಿ ಇದ್ದ ಪಟಾಕಿ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಸಿಡಿದು ಸಂಪೂರ್ಣ ನಾಶವಾಗಿದೆ.

Advertisement

ಬೆಂಕಿ ಹೊತ್ತಿಕೊಂಡ ಬಳಿಕ ನಿರಂತರವಾಗಿ ಪಟಾಕಿಗಳು ಸಿಡಿಯತೊಡಗಿದ್ದು, ಭಾರಿ ಸದ್ದು ಸ್ಥಳದಲ್ಲಿ ಕೇಳಿಬಂದಿದ್ದು,ಬೆಂಕಿಯ ಕೆನ್ನಾಲಗೆ ಮುಗಿಲ್ಲನ್ನಾವರಿಸಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ದೌಡಾಯಿಸಿದ್ದಾರೆ.

ಸ್ಪೋಟದ ತೀವ್ರತೆಗೆ ಕೆರೆಯಲ್ಲಿದ್ದ ಜಲಚರ ಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಶವಾಗಿದೆ ಎಂದು ವರದಿಯಾಗಿದೆ.

ಚುನಾವಣ ವರ್ಷವಾದುದರಿಂದ ಫಲಿತಾಂಶದ ಬಳಿಕ ಸಂಭ್ರಮಾಚರಣೆ ವೇಳೆ ಅಗತ್ಯವಾಗಿರುವ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next