Advertisement

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

11:24 PM Sep 03, 2024 | Team Udayavani |

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ ಸೆ. 5ರವರೆಗೂ ಪ್ರಾಧಿಕಾರದ ಸಭೆ ನಡೆಸದೆ ಯಥಾಸ್ಥಿತಿ ಕಾಪಾಡಿಕೊಂಡುವಂತೆ ಕೋರ್ಟ್‌ ಸೂಚಿಸಿದ್ದರೂ ಸಭೆ ಮಾಡಿರುವುದು ಕೋರ್ಟ್‌ ಆದೇಶದ ಉಲ್ಲಂಘನೆ ಮಾಡಿದಂತೆ. ಪ್ರಾಧಿಕಾರದ ರಚನೆಯಿಂದ ನಮ್ಮ ಮೂಲ ಧಾರ್ಮಿಕ ನಂಬಿಕೆ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ನಾವು ಧಾರ್ಮಿಕ ಹಕ್ಕುಗಳನ್ನು ಯಾರಿಗೂ ಕೊಟ್ಟಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

ಸಭೆಯಿಂದ ದೂರ ಉಳಿದ ಪ್ರಮೋದಾ ದೇವಿ ಒಡೆಯರ್‌
ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿ ಕಾರದ ಸಭೆಗೆ ರಾಜ ವಂಶಸ್ಥೆ ಪ್ರಮೋದಾ ದೇವಿ ಹಾಜರಾಗಲಿಲ್ಲ. ಸಭೆಯ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಇ-ಮೇಲ್‌ ಮೂಲಕ ಪ್ರಮೋದಾದೇವಿ ಅವರಿಗೆ ಪತ್ರ ಬರೆದು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು.

ಮೇಲ್‌ ಮೂಲಕವೇ ಪ್ರತ್ಯುತ್ತರ ನೀಡಿದ ಪ್ರಮೋದಾದೇವಿ, ಸಭೆ ಕಾನೂನು ಬಾಹಿರವಾಗಿದೆ. ನ್ಯಾಯಾಲಯದ ವಿರುದ್ಧ ಸಭೆ ಸರಿಯಲ್ಲ. ಕಾನೂನು ಉಲ್ಲಂಘನೆ ಆಗಲಿದೆ ಎಂದ ಎಚ್ಚರಿಕೆ ನೀಡಿದ್ದಾರೆ. ಸೆ. 5ಕ್ಕೆ ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ ಇದೆ. ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next