Advertisement

Mysuru: ಚಾಮುಂಡಿಬೆಟ್ಟಕ್ಕೆ ಶುಕ್ರವಾರ ಸಾರ್ವಜನಿಕರಿಗೆ ನಿರ್ಬಂಧ

10:18 PM Oct 12, 2023 | Team Udayavani |

ಮೈಸೂರು: ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ನಾಳೆ (ಅಕ್ಟೋಬರ್ 13 ) ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಆದೇಶಿಸಲಾಗಿದೆ.

Advertisement

ಆದರೆ ಚಾಮುಂಡಿಬೆಟ್ಟದಲ್ಲಿ ಇರುವ ನಿವಾಸಿಗಳಿಗೆ, ತುರ್ತು ಸೇವೆಗಳಿಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಇದು ಅನ್ವಯಿಸುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮತ್ತು ಅದಕ್ಕೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳು ಆಯೋಜನೆಯಾಗಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ಮಧ್ಯರಾತ್ರಿಯಿಂದ ಶನಿವಾರ (ಅ.14) ಬೆಳಗಿನವರೆಗೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next