Advertisement

ಕಳೆಗಟ್ಟಿದ ಮೈಸೂರು ದಸರಾ : ಜಂಬೂ ಸವಾರಿಗೆ ನಡೆಯುತ್ತಿದೆ ಸಕಲ ಸಿದ್ಧತೆ

08:02 AM Oct 15, 2021 | Team Udayavani |

ಮೈಸೂರು : ವಿಶ್ವ ವಿಖ್ಯಾತ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಮೈಸೂರಿನಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತರದಿಂದ ಕಾದು ಕುಳಿತಿದ್ದಾರೆ.

Advertisement

ಈ ಜಂಬೂ ಸವಾರಿಯಲ್ಲಿ ಅಂಬಾರಿಯನ್ನು ಅಭಿಮನ್ಯು ಅಂಬಾರಿ ಹೊರಲಿದ್ದಾನೆ, ಹಾಗೆ ಅದರ ಜೊತೆ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಕೂಡ ಸಾಗಲಿವೆ. ಒಂದು ಗಂಟೆ ಮೆರವಣಿಗೆ ನಂತರ ಸವಾರಿ ಸಂಪನ್ನಗೊಳ್ಳಲಿದೆ.

ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಚಾಮುಂಡಿಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತದೆ.  8:00 ಗಂಟೆಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುತ್ತಾರೆ.

ಸಂಬಾರಿ ಮೆರವಣಿಗೆ ಯಾವಾಗ

Advertisement

ಇಂದು ಸಂಜೆ 4.36ರಿಂದ 4.46ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ನಂತರ ಸಂಜೆ 5 ರಿಂದ 5.30ರೊಳಗೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯು ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಹೆಜ್ಜೆ ಹಾಕಲಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next