Advertisement

Mysuru Dasara: ದಸರಾ ಆನೆಗಳಿಗೆ ಭೂರಿ ಭೋಜನದ ಮೆನು

05:20 PM Sep 06, 2023 | Team Udayavani |

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆಗೆ ಉತ್ಸವ ಮುಕ್ತಾಯದವರೆಗೆ ಪೌಷ್ಟಿಕ ಆಹಾರ ನೀಡುವ ಭೂರಿ ಭೋಜ ನದ ಮೆನು ಸಿದ್ಧಗೊಂಡಿದೆ.

Advertisement

ಈ ಬಾರಿಯೂ ದಸರಾ ಉತ್ಸವಕ್ಕೆ 14 ಆನೆಗಳನ್ನು ಕರೆತರಲಾಗುತ್ತಿದ್ದು, ಮೊದಲ ತಂಡ ದಲ್ಲಿ 8(ಅರ್ಜುನ ಗೈರು) ಆನೆಗಳನ್ನು ಬರಮಾಡಿಕೊಳ್ಳಲಾಗಿದೆ. ಆನೆಗಳಿಗೆ ಯಾವುದೇ ಕೊರತೆಯಾಗದಂತೆ ಅರಣ್ಯ ಇಲಾಖೆ ನಿತ್ಯ ಪುಷ್ಕಳ ಆಹಾರ ನೀಡಲು ಸಿದ್ಧತೆ ಮಾಡಿದೆ. ಸೆ.7 ಅಥವಾ 08ರಿಂದ ಎಲ್ಲಾ ಆನೆಗಳಿಗೂ ವಿವಿಧ ಹಂತದ ತಾಲೀಮು ಆರಂಭವಾಗಲಿದೆ. ಈ ಎಲ್ಲಾ ಆನೆಗಳಿಗೂ ಹೆಚ್ಚಿನ ದೈಹಿಕ ಸಾಮರ್ಥ್ಯ ಅವಶ್ಯಕತೆ ಇರುವು ದ ರಿಂದ ಸೆ.7ರಿಂದಲೇ ಗಜಪಡೆಗೆ ವಿಶೇಷ ಪೌಷ್ಟಿಕ ಆಹಾರ ನೀಡುವುದು ಆರಂಭವಾಗಲಿದೆ.

ಆನೆಗಳ ಸಾಮರ್ಥ್ಯ ವೃದ್ಧಿಗೆ ಹಸಿರುಕಾಳು, ಕುಸುಬಲಕ್ಕಿ, ಉದ್ದಿನಕಾಳು, ಈರುಳ್ಳಿ, ಗೋಧಿ, ಅವಲಕ್ಕಿ, ತರಕಾರಿ ಮಿಶ್ರಣದ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮೊದಲ ತಂಡದಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 8 ಆನೆ(ಅರ್ಜುನ ಗೈರು) ಆಗಮಿಸಿದ್ದು, ಭೀಮ, ಅರ್ಜುನ, ಧನಂಜಯ, ಗೋಪಿ, ಕಂಜನ್‌, ವಿಜಯಾ, ವರಲಕ್ಷ್ಮೀ ಆನೆಗಳ ಅರಮನೆಗೆ ಆಗಮಿಸಿವೆ. 2ನೇ ತಂಡದಲ್ಲಿ ಪ್ರಶಾಂತ, ಸುಗ್ರೀವ, ಹಿರಣ್ಯಾ, ಲಕ್ಷ್ಮೀ, ರೋಹಿತ್‌ 5 ಆನೆ ಬರಲಿವೆ.

ಇಂದು ತೂಕ ಪರೀಕ್ಷೆ: ಆನೆಗಳ ಆರೋಗ್ಯದ ಬಗ್ಗೆ ವಿಶೇಷ ನಿಗಾ ಇಡುವ ಉದ್ದೇಶದಿಂದ ಸೆ. 6 ರಂದು ಗಜಪಡೆಯ ಎಲ್ಲ ಆನೆಗಳ ತೂಕ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಕಳೆದ ವರ್ಷಕ್ಕಿಂತ ಸಾಕಷ್ಟು ಪ್ರಮಾಣದಲ್ಲಿ ತೂಕ ಇಳಿಕೆಯಾಗಿದ್ದಲ್ಲಿ ಅವುಗಳಿಗೆ ವಿಶೇಷ ಆರೈಕೆ ದೊರೆಯಲಿದೆ.

ಶೆಡ್‌ ನಿರ್ಮಾಣ ಕಾರ್ಯ ಪೂರ್ಣ: ಗಜಪಡೆ, ಮಾವುತರು ಹಾಗೂ ಕಾವಾಡಿಗಳ ಕುಟುಂಬ ವಾಸ್ತವ್ಯ ಹೂಡಲು ಅರಮನೆ ಆವರಣದಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದೆ. ಅ.15ರಿಂದ ಅ.24ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಅಲ್ಲಿಯವರೆಗೆ ಗಜಪಡೆ, ಮಾವು ತರು ಮತ್ತು ಕಾವಾಡಿಗಳು ಅರಮನೆ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ನಿರ್ಮಿಸಿ ರುವ ಶೆಡ್‌ ಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈಗಾ ಗಲೇ ಅರಮನೆ ಆವರಣದಲ್ಲಿ ಮಾವುತರು, ಕಾವಾಡಿ, ಆನೆಗಳ ವಾಸ್ತವ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಟೆಂಟ್‌ ನಿರ್ಮಾಣ, ಶೌಚ ಗೃಹ, ತಾತ್ಕಾಲಿಕ ಶಾಲೆ ನಿರ್ಮಿಸಲಾಗಿದೆ.

Advertisement

ಸೆ.7-8 ರಿಂದ ದಸರಾ ಆನೆಗಳಿಗೆ ತಾಲೀಮು ಆರಂಭ: ಸೆ. 7 ಅಥವಾ 8 ರಿಂದ ತಾಲೀಮು ಆರಂಭವಾಗಲಿದ್ದು, ಆರಂಭದಲ್ಲಿ ಯಾವುದೇ ಭಾರ ಹಾಕದೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಸಲಿವೆ. 5 ದಿನ ಕಳೆದ ನಂತರ ಭಾರ ಹೊರುವ ತಾಲೀಮು ಪ್ರಾರಂಭವಾಗಲಿದೆ. ಈ ಅವಧಿಯಲ್ಲಿ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಗೋಪಿ ಆನೆಗಳಿಗೆ ಭಾರ ಹೊರಿಸಲಾಗುತ್ತದೆ. ಹೊಸ ಆನೆ ಕಂಜನ್‌ ಕೂಡ ತಾಲೀಮಿನಲ್ಲಿ ಭಾಗಿಯಾಗಲಿದೆ. ಅಭಿಮನ್ಯು ಜತೆಗೆ ಇತರೆ ಆನೆ ಸಿದ್ಧಗೊಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ 7ಆನೆಗಳಿಗೆ ಸಾಮರ್ಥ್ಯ ವೃದ್ಧಿಗೆ ಹೆಚ್ಚಿನ ಪ್ರಮಾಣದಲ್ಲಿ ಆಹಾರ ದೊರೆಯಲಿದೆ. ಗಂಡಾನೆಗಳೊಂದಿಗೆ ಹೆಣ್ಣಾನೆಗಳಾದ ವರಲಕ್ಷ್ಮೀ, ವಿಜಯ ಕೂಡ ತಾಲೀಮು ನಡೆಸಲಿವೆ.

ಆನೆಗಳ ಆಹಾರ ಕ್ರಮ ಹೇಗಿದೆ?

 ಆನೆಗಳಿಗೆ ಹೊಟ್ಟೆ ತುಂಬುವಷ್ಟು ಹುಲ್ಲು, ಸೊಪ್ಪು ನೀಡಲಾಗುವುದು.

 ಬೆಳಗ್ಗೆ 6.30 ಮತ್ತು ರಾತ್ರಿ 7ಕ್ಕೆ ಹಸಿರುಕಾಳು, ಕುಸುಬಲಕ್ಕಿ, ಉದ್ದಿನಕಾಳು, ಈರುಳ್ಳಿ, ಗೋಧಿ, ಅವಲಕ್ಕಿ, ತರಕಾರಿ ಮಿಶ್ರಣದ ಆಹಾರ

 ಸಂಜೆ ಸ್ವಲ್ಪ ಪ್ರಮಾಣದಲ್ಲಿ ಭತ್ತ, ತೆಂಗಿನಕಾಯಿ, ಬೆಲ್ಲ, ಭತ್ತದ ಒಣಹುಲ್ಲಿನ ಜತೆ ಹಿಂಡಿ, ಅಲ್ಪ ಪ್ರಮಾಣದಲ್ಲಿ ಬೆಣ್ಣೆ ನೀಡಲಾಗುತ್ತದೆ.

 ಆನೆಗಳು ತಾಲೀಮು ಮುಗಿಸಿ ಬಂದ ನಂತರ ಸ್ನಾನ ಮಾಡಿಸಿ ಶುಚಿಗೊಳಿಸುವ ಕಾರ್ಯ ನಿತ್ಯ ನಡೆಯುತ್ತದೆ.

 ಒಂದೂವರೆ ತಿಂಗಳ ಅವಧಿಯಲ್ಲಿ ಆನೆಗಳ ಆರೋಗ್ಯದಲ್ಲಿ ಏರುಪೇರಾಗದಂತೆ ನೋಡಿಕೊಳ್ಳಲು ಅರಣ್ಯ ಇಲಾಖೆ ಸಿದ್ಧತೆ ಕೈಗೊಂಡಿದೆ.

-ಸತೀಶ್‌ ದೇಪುರ

Advertisement

Udayavani is now on Telegram. Click here to join our channel and stay updated with the latest news.

Next